<p><strong>ಕಾರವಾರ</strong>: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದ ವೇಳೆ ಗಂಗಾವಳಿ ನದಿಯಲ್ಲಿ ಶೇಖರಣೆಯಾಗಿದ್ದ ಹೂಳಿನ ರಾಶಿ ತೆರವುಗೊಳಿಸಲು ಎರಡು ವರ್ಷದ ಬಳಿಕ ಪ್ರಕ್ರಿಯೆ ಆರಂಭಗೊಂಡಿದೆ.</p>.<p>ನದಿಯಲ್ಲಿ ಸಂಗ್ರಹಗೊಂಡಿರುವ ಅಂದಾಜು 1.68 ಲಕ್ಷ ಘನ ಮೀಟರ್ ಹೂಳು ತೆರವುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ, ಮಂಗಳವಾರ ನದಿಯಲ್ಲಿ ದೋಣಿ ಮೂಲಕ ಸಾಗಿದ ಅಧಿಕಾರಿಗಳು ಬಾಥಿಮೆಟ್ರಿಕ್ ಸಮೀಕ್ಷೆ ನಡೆಸಿದರು.</p>.<p>ಕಳೆದ ವರ್ಷವೂ ಸಮೀಕ್ಷೆ ನಡೆಸಿದ್ದ ಬಂದರು ಇಲಾಖೆ 1.68 ಲಕ್ಷ ಘನ ಮೀಟರ್ ಹೂಳು ತೆರವಿಗೆ ₹4.34 ಕೋಟಿ ಅಂದಾಜು ಪಟ್ಟಿ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಅನುದಾನ ಬಿಡುಗಡೆ ಆಗಿರಲಿಲ್ಲ. ₹2 ಕೋಟಿ ಬಿಡುಗಡೆಗೆ ಸರ್ಕಾರ ಸಮ್ಮತಿಸಿದ್ದರಿಂದ 68 ಸಾವಿರ ಘನ ಮೀಟರ್ ಹೂಳು ತೆರವಿಗೆ ನಿರ್ಧರಿಸಿ, ಟೆಂಡರ್ ಕರೆಯಲಾಗಿತ್ತು. ಆದರೆ, ರಾಜ್ಯ ಸರ್ಕಾರ ₹4.34 ಕೋಟಿ ವೆಚ್ಚದಲ್ಲಿ ಸಂಪೂರ್ಣ ಹೂಳು ತೆರವುಗೊಳಿಸಲು ಆದೇಶಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-950337180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದ ವೇಳೆ ಗಂಗಾವಳಿ ನದಿಯಲ್ಲಿ ಶೇಖರಣೆಯಾಗಿದ್ದ ಹೂಳಿನ ರಾಶಿ ತೆರವುಗೊಳಿಸಲು ಎರಡು ವರ್ಷದ ಬಳಿಕ ಪ್ರಕ್ರಿಯೆ ಆರಂಭಗೊಂಡಿದೆ.</p>.<p>ನದಿಯಲ್ಲಿ ಸಂಗ್ರಹಗೊಂಡಿರುವ ಅಂದಾಜು 1.68 ಲಕ್ಷ ಘನ ಮೀಟರ್ ಹೂಳು ತೆರವುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ, ಮಂಗಳವಾರ ನದಿಯಲ್ಲಿ ದೋಣಿ ಮೂಲಕ ಸಾಗಿದ ಅಧಿಕಾರಿಗಳು ಬಾಥಿಮೆಟ್ರಿಕ್ ಸಮೀಕ್ಷೆ ನಡೆಸಿದರು.</p>.<p>ಕಳೆದ ವರ್ಷವೂ ಸಮೀಕ್ಷೆ ನಡೆಸಿದ್ದ ಬಂದರು ಇಲಾಖೆ 1.68 ಲಕ್ಷ ಘನ ಮೀಟರ್ ಹೂಳು ತೆರವಿಗೆ ₹4.34 ಕೋಟಿ ಅಂದಾಜು ಪಟ್ಟಿ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಅನುದಾನ ಬಿಡುಗಡೆ ಆಗಿರಲಿಲ್ಲ. ₹2 ಕೋಟಿ ಬಿಡುಗಡೆಗೆ ಸರ್ಕಾರ ಸಮ್ಮತಿಸಿದ್ದರಿಂದ 68 ಸಾವಿರ ಘನ ಮೀಟರ್ ಹೂಳು ತೆರವಿಗೆ ನಿರ್ಧರಿಸಿ, ಟೆಂಡರ್ ಕರೆಯಲಾಗಿತ್ತು. ಆದರೆ, ರಾಜ್ಯ ಸರ್ಕಾರ ₹4.34 ಕೋಟಿ ವೆಚ್ಚದಲ್ಲಿ ಸಂಪೂರ್ಣ ಹೂಳು ತೆರವುಗೊಳಿಸಲು ಆದೇಶಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-950337180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>