<p>ಕಾರವಾರ: ‘ಸಮಾಜದಲ್ಲಿ ಲಿಂಗ ತಾರತಮ್ಯ ಸಂಪೂರ್ಣ ತೊಡೆದು ಹಾಕುವ ಅಗತ್ಯವಿದೆ. ಮಹಿಳೆಯರಿಗೆ ಸಿಗಬೇಕಾದ ಸಮಾನ ಅವಕಾಶ ಕಸಿಯುವುದರ ವಿರುದ್ಧ ಹೋರಾಟ ಬಲಗೊಳ್ಳಬೇಕಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ ಹೇಳಿದರು.</p>.<p>ಇಲ್ಲಿನ ಸಿಐಟಿಯು ಕಚೇರಿಯಲ್ಲಿ ಶುಕ್ರವಾರ ಸಿಐಟಿಯು, ಕೆಪಿಆರ್ಎಸ್ ರೈತ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಹಾಗೂ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಜಂಟಿಯಾಗಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರನ್ನು ಮೀರಿದ ಸಾಧನೆ ಮಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜ ಎಂಬ ಕಲ್ಪನೆ ಸಂಪೂರ್ಣ ತೊಡೆದು ಹಾಕಲು ಸಮಾಜ ಒಗ್ಗಟ್ಟಾಗಬೇಕಿದೆ’ ಎಂದರು.</p>.<p>ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯಮುನಾ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಸೇವಾ ನಿವೃತ್ತರಾದ ಸಂಘಟನೆಯ ಪದಾಧಿಕಾರಿಗಳಾದ ಮೋಹಿನಿ ನಮ್ಸೇಕರ್, ತಾರಾ ನಾಯ್ಕ, ಗೀತಾ ರಾಯ್ಕರ್, ಲತಾ ಕಳಸ್, ಮಂಗಲಾ ದೇಸಾಯಿ, ಗಂಗಾ ಗೌಡ, ಶೈಲಾ ನಾಯ್ಕ ಅವರನ್ನು ಸನ್ಮಾನಿಸಲಾಯಿತು.</p>.<p>ಎನ್.ಜಿ.ನಾಯ್ಕ, ಶ್ಯಾಮನಾಥ ನಾಯ್ಕ, ವೀರೇಶ ರಾಠೋಡ, ಮಂಜುಳಾ ಕಾಣಕೋಣಕರ್, ಶೇಕಪ್ಪ ಪಿ., ಶಶಿಧರ್, ಯಲ್ಲಪ್ಪ, ಪ್ರದ್ಯುಮ್ನ, ಕಲ್ಪನಾ ಕೋಳಿ, ಪೂರ್ಣಿಮಾ ನಾಯ್ಕ, ಹಮೀದಾ, ಸರೋಜಾ ಗುನಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-20-1096845621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಸಮಾಜದಲ್ಲಿ ಲಿಂಗ ತಾರತಮ್ಯ ಸಂಪೂರ್ಣ ತೊಡೆದು ಹಾಕುವ ಅಗತ್ಯವಿದೆ. ಮಹಿಳೆಯರಿಗೆ ಸಿಗಬೇಕಾದ ಸಮಾನ ಅವಕಾಶ ಕಸಿಯುವುದರ ವಿರುದ್ಧ ಹೋರಾಟ ಬಲಗೊಳ್ಳಬೇಕಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ ಹೇಳಿದರು.</p>.<p>ಇಲ್ಲಿನ ಸಿಐಟಿಯು ಕಚೇರಿಯಲ್ಲಿ ಶುಕ್ರವಾರ ಸಿಐಟಿಯು, ಕೆಪಿಆರ್ಎಸ್ ರೈತ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಹಾಗೂ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಜಂಟಿಯಾಗಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರನ್ನು ಮೀರಿದ ಸಾಧನೆ ಮಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜ ಎಂಬ ಕಲ್ಪನೆ ಸಂಪೂರ್ಣ ತೊಡೆದು ಹಾಕಲು ಸಮಾಜ ಒಗ್ಗಟ್ಟಾಗಬೇಕಿದೆ’ ಎಂದರು.</p>.<p>ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯಮುನಾ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಸೇವಾ ನಿವೃತ್ತರಾದ ಸಂಘಟನೆಯ ಪದಾಧಿಕಾರಿಗಳಾದ ಮೋಹಿನಿ ನಮ್ಸೇಕರ್, ತಾರಾ ನಾಯ್ಕ, ಗೀತಾ ರಾಯ್ಕರ್, ಲತಾ ಕಳಸ್, ಮಂಗಲಾ ದೇಸಾಯಿ, ಗಂಗಾ ಗೌಡ, ಶೈಲಾ ನಾಯ್ಕ ಅವರನ್ನು ಸನ್ಮಾನಿಸಲಾಯಿತು.</p>.<p>ಎನ್.ಜಿ.ನಾಯ್ಕ, ಶ್ಯಾಮನಾಥ ನಾಯ್ಕ, ವೀರೇಶ ರಾಠೋಡ, ಮಂಜುಳಾ ಕಾಣಕೋಣಕರ್, ಶೇಕಪ್ಪ ಪಿ., ಶಶಿಧರ್, ಯಲ್ಲಪ್ಪ, ಪ್ರದ್ಯುಮ್ನ, ಕಲ್ಪನಾ ಕೋಳಿ, ಪೂರ್ಣಿಮಾ ನಾಯ್ಕ, ಹಮೀದಾ, ಸರೋಜಾ ಗುನಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-20-1096845621</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>