<p><strong>ಕಾರವಾರ:</strong> ಇಲ್ಲಿನ ಬಿಲ್ಟ್ ವೃತ್ತದ ಸಮೀಪ, ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕೆಳಭಾಗದಲ್ಲಿ ನಿಲುಗಡೆ ಮಾಡಿದ್ದ ಗೂಡ್ಸ್ ವಾಹನಕ್ಕೆ ಶನಿವಾರ ಬೆಂಕಿ ಹೊತ್ತಿ ಉರಿಯಿತು.</p>.<p>ನಗರವೂ ಸೇರಿದಂತೆ ವಿವಿಧೆಡೆಗೆ ಹಾಲು ಪೂರೈಕೆ ಮಾಡಲು ಬಳಕೆ ಆಗುತ್ತಿದ್ದ ವಾಹನವು ನಗರದ ತಾಮ್ಸೆವಾಡಾದ ಸಂತೋಷಿ ಚಿಪ್ಕರ್ ಎಂಬುವವರಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯ ಪಕ್ಕ ಚಾಲಕ ವಾಹನ ನಿಲುಗಡೆ ಮಾಡಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. </p>.<p>ವಾಹನಕ್ಕೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕಕ್ಕೆ ಒಳಗಾದರು. ಹೊತ್ತಿ ಉರಿಯುತ್ತಿದ್ದ ವಾಹನದ ಬೆಂಕಿ ಆರಿಸಲು ಸ್ಥಳದಲ್ಲಿದ್ದ ಜನರು ಪ್ರಯತ್ನಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದರು.</p>.<p>‘ಬಿಸಿಲಿನ ಝಳಕ್ಕೆ ಸಿಲುಕಿ, ವಾಹನದಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಅಗ್ನಿ ಅವಘಡ ಸಂಭವಿಸಿರಬಹುದು. ವಾಹನದ ಎಂಜಿನ್ ಸೇರಿದಂತೆ ಬಹುಭಾಗ ಸುಟ್ಟು ಕರಕಲಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಇಲ್ಲಿನ ಬಿಲ್ಟ್ ವೃತ್ತದ ಸಮೀಪ, ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕೆಳಭಾಗದಲ್ಲಿ ನಿಲುಗಡೆ ಮಾಡಿದ್ದ ಗೂಡ್ಸ್ ವಾಹನಕ್ಕೆ ಶನಿವಾರ ಬೆಂಕಿ ಹೊತ್ತಿ ಉರಿಯಿತು.</p>.<p>ನಗರವೂ ಸೇರಿದಂತೆ ವಿವಿಧೆಡೆಗೆ ಹಾಲು ಪೂರೈಕೆ ಮಾಡಲು ಬಳಕೆ ಆಗುತ್ತಿದ್ದ ವಾಹನವು ನಗರದ ತಾಮ್ಸೆವಾಡಾದ ಸಂತೋಷಿ ಚಿಪ್ಕರ್ ಎಂಬುವವರಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯ ಪಕ್ಕ ಚಾಲಕ ವಾಹನ ನಿಲುಗಡೆ ಮಾಡಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. </p>.<p>ವಾಹನಕ್ಕೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕಕ್ಕೆ ಒಳಗಾದರು. ಹೊತ್ತಿ ಉರಿಯುತ್ತಿದ್ದ ವಾಹನದ ಬೆಂಕಿ ಆರಿಸಲು ಸ್ಥಳದಲ್ಲಿದ್ದ ಜನರು ಪ್ರಯತ್ನಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದರು.</p>.<p>‘ಬಿಸಿಲಿನ ಝಳಕ್ಕೆ ಸಿಲುಕಿ, ವಾಹನದಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಅಗ್ನಿ ಅವಘಡ ಸಂಭವಿಸಿರಬಹುದು. ವಾಹನದ ಎಂಜಿನ್ ಸೇರಿದಂತೆ ಬಹುಭಾಗ ಸುಟ್ಟು ಕರಕಲಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>