ಕಾರವಾರದ ಮುಂಡಗೋಡದ ಹಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಪಾಠ ಕೇಳುವ ಪರಿಸ್ಥಿತಿ ಬಂದೊದಗಿದೆ. ಶಾಲೆಯ ಕಟ್ಟಡಕ್ಕೆ ತಾಗಿ ಚರಂಡಿ ಇದ್ದು, ಅದರಲ್ಲಿನ ತ್ಯಾಜ್ಯ ಮುಂದೆ ಸಾಗದೇ, ದುರ್ನಾತ ಬೀರುತ್ತಿದೆ. ಇದರಿಂದ ಮಕ್ಕಳು ತರಗತಿ ಕೊಠಡಿಯಲ್ಲಿ ಕುಳಿತು ಪಾಠ ಕೇಳಲು ಹಿಂಜರಿಯುತ್ತಿದ್ದಾರೆ. ತರಗತಿ ಕೊಠಡಿಯಲ್ಲಿ ದುರ್ನಾತ ಬೀರುತ್ತಿರುವುದರಿಂದ ಬಹುತೇಕ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ ಎಂದು ಪಾಲಕರು ದೂರುತ್ತಿದ್ದಾರೆ.