<p>ಕಾರವಾರ: ‘ಅಂಗಡಿ ಮುಂಗಟ್ಟುಗಳು, ಖಾಸಗಿ ಕಚೇರಿಗಳಿಗೆ ಅಳವಡಿಸುವ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಹರ್ಕಡೆ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಬೇಕು. ಸ್ಥಳೀಯರೊಂದಿಗೆ ಸಂವಹನ ನಡೆಸುವಾಗ ಕನ್ನಡ ಮಾತನಾಡಲು ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯಲ್ಲಿ ನೌಕಾದಳ, ಅಣು ವಿದ್ಯುತ್ ಸ್ಥಾವರದಂತಹ ರಾಷ್ಟ್ರೀಯ ಯೋಜನೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ. ಈ ತಾರತಮ್ಯ ನೀತಿ ವಿರುದ್ಧ ಶೀಘ್ರದಲ್ಲಿ ಧ್ವನಿ ಎತ್ತಲಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ವಿರುದ್ಧವೂ ಹೋರಾಟ ನಡೆಸಲಾಗುವುದು’ ಎಂದರು.</p>.<p>ವಿನಾಯಕ ನಾಯಕ, ನಾಗರಾಜ ನಾಯ್ಕ, ನೀಲಾ ಮಾದರ, ಮಂಜುನಾಥ ನಾಯಕ, ತಿಮ್ಮಪ್ಪ ನಾಯ್ಕ, ಬಸವರಾಜ ಬೆಂಡಿಗೇರಿಮಠ, ರಾಜಾ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-20-458785024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಅಂಗಡಿ ಮುಂಗಟ್ಟುಗಳು, ಖಾಸಗಿ ಕಚೇರಿಗಳಿಗೆ ಅಳವಡಿಸುವ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಹರ್ಕಡೆ ಹೇಳಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಬೇಕು. ಸ್ಥಳೀಯರೊಂದಿಗೆ ಸಂವಹನ ನಡೆಸುವಾಗ ಕನ್ನಡ ಮಾತನಾಡಲು ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯಲ್ಲಿ ನೌಕಾದಳ, ಅಣು ವಿದ್ಯುತ್ ಸ್ಥಾವರದಂತಹ ರಾಷ್ಟ್ರೀಯ ಯೋಜನೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ. ಈ ತಾರತಮ್ಯ ನೀತಿ ವಿರುದ್ಧ ಶೀಘ್ರದಲ್ಲಿ ಧ್ವನಿ ಎತ್ತಲಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ವಿರುದ್ಧವೂ ಹೋರಾಟ ನಡೆಸಲಾಗುವುದು’ ಎಂದರು.</p>.<p>ವಿನಾಯಕ ನಾಯಕ, ನಾಗರಾಜ ನಾಯ್ಕ, ನೀಲಾ ಮಾದರ, ಮಂಜುನಾಥ ನಾಯಕ, ತಿಮ್ಮಪ್ಪ ನಾಯ್ಕ, ಬಸವರಾಜ ಬೆಂಡಿಗೇರಿಮಠ, ರಾಜಾ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-20-458785024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>