<p><strong>ಕಾರವಾರ:</strong> ‘ಸಾಮಾಜಿಕ ಮತ್ತು ಧಾರ್ಮಿಕ ಮೌಲ್ಯಯುತ ಚಿಂತನೆಗಳೊಂದಿಗೆ ಜೀವನದಲ್ಲಿ ಸಾಧನೆ ಮಾಡಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ’ ಎಂದು ಹಿಂದೂ ಪ್ರೌಢಶಾಲೆಯ ಶಿಕ್ಷಕಿ ವನಿತಾ ಶೇಟ್ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಧರ್ಮಶೀಲತೆ, ಶ್ರದ್ಧೆ ಮತ್ತು ಸಾತ್ವಿಕತೆಯ ಪ್ರತೀಕವಾಗಿದ್ದರು. ಕೌಟುಂಬಿಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಕುಟುಂಬಕ್ಕೆ ಭೂಷಣ ಪ್ರಾಯವಾಗಿದ್ದರು. ಬಸವತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಅವರು ವೇಮನ ಮಹಾಯೋಗಿಯಾಗಿ ಬದಲಾಗಲು ಪ್ರೇರಣೆಯಾದವರು’ ಎಂದರು.</p>.<p>‘ಕರ್ನಾಟಕದಲ್ಲಿ ಮಾತ್ರವಲ್ಲದೇ ಆಂಧ್ರ ಪ್ರದೇಶ, ಮಹಾರಾಷ್ಟ್ರ ಹಾಗೂ ಹಲವು ರಾಜ್ಯಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಉತ್ಸವ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಅಂಗನವಾಡಿ ಕಾರ್ಯಕರತೆಯರು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿವಾಜಿ ವಿದ್ಯಾಮಂದಿರದ ಶಿಕ್ಷಕ ಮಹಾದೇವ ರಾಣೆ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಸಾಮಾಜಿಕ ಮತ್ತು ಧಾರ್ಮಿಕ ಮೌಲ್ಯಯುತ ಚಿಂತನೆಗಳೊಂದಿಗೆ ಜೀವನದಲ್ಲಿ ಸಾಧನೆ ಮಾಡಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ’ ಎಂದು ಹಿಂದೂ ಪ್ರೌಢಶಾಲೆಯ ಶಿಕ್ಷಕಿ ವನಿತಾ ಶೇಟ್ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಧರ್ಮಶೀಲತೆ, ಶ್ರದ್ಧೆ ಮತ್ತು ಸಾತ್ವಿಕತೆಯ ಪ್ರತೀಕವಾಗಿದ್ದರು. ಕೌಟುಂಬಿಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಕುಟುಂಬಕ್ಕೆ ಭೂಷಣ ಪ್ರಾಯವಾಗಿದ್ದರು. ಬಸವತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಅವರು ವೇಮನ ಮಹಾಯೋಗಿಯಾಗಿ ಬದಲಾಗಲು ಪ್ರೇರಣೆಯಾದವರು’ ಎಂದರು.</p>.<p>‘ಕರ್ನಾಟಕದಲ್ಲಿ ಮಾತ್ರವಲ್ಲದೇ ಆಂಧ್ರ ಪ್ರದೇಶ, ಮಹಾರಾಷ್ಟ್ರ ಹಾಗೂ ಹಲವು ರಾಜ್ಯಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಉತ್ಸವ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಅಂಗನವಾಡಿ ಕಾರ್ಯಕರತೆಯರು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿವಾಜಿ ವಿದ್ಯಾಮಂದಿರದ ಶಿಕ್ಷಕ ಮಹಾದೇವ ರಾಣೆ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>