<p><strong>ಕಾರವಾರ:</strong> ‘ಮಳೆಗಾಲದಲ್ಲಿ ಎದುರಾಗುವ ಪ್ರವಾಹ ಸ್ಥಿತಿ, ಪ್ರಾಕೃತಿಕ ವಿಕೋಪಗಳ ವೇಳೆ ಜನರಿಗೆ ನೆರವಾಗಲು ಶೌರ್ಯ ಘಟಕದ ಸದಸ್ಯರು ಹಿಂಜರಿಯಬಾರದು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ಹೇಳಿದರು.</p>.<p>ಇಲ್ಲಿನ ಟ್ರಸ್ಟ್ ಕಚೇರಿಯಲ್ಲಿ ಈಚೆಗೆ ತಾಲ್ಲೂಕಿನ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳೆದ 5 ವರ್ಷಗಳಿಂದ ಕಾರವಾರ ತಾಲ್ಲೂಕಿನಲ್ಲಿ ಶೌರ್ಯ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲದ ವೇಳೆ ಅನಾಹುತಗಳು ಸಂಭವಿಸುವುದು ಹೆಚ್ಚು. ಈ ಬಗ್ಗೆ ಸ್ವಯಂಸೇವಕರು ಮುಂಜಾಗ್ರತೆ ಕ್ರಮವಹಿಸಬೇಕು’ ಎಂದರು.</p>.<p>ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ‘ಘಟಕಗಳ ಬಲವರ್ಧನೆಗೆ ಪೂರಕವಾಗಿ ಎಲ್ಲರಲ್ಲಿಯೂ ಸೇವಾ ಮನೋ ಭಾವದೊಂದಿಗೆ ಸಮಾಜಮುಖಿ ಕಾಳಜಿ ಇರಬೇಕು’ ಎಂದರು.</p>.<p>ತಾಲ್ಲೂಕು ಯೋಜನಾಧಿಕಾರಿ ಶಿವರಾಜ್ ವಿ.ಆಚಾರ್ಯ ಶೌರ್ಯ ಸಮಿತಿಯ ಕಾರ್ಯವೈಖರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ಉದಯ್, ರಾಮ ಸೋಮ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-619544246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಮಳೆಗಾಲದಲ್ಲಿ ಎದುರಾಗುವ ಪ್ರವಾಹ ಸ್ಥಿತಿ, ಪ್ರಾಕೃತಿಕ ವಿಕೋಪಗಳ ವೇಳೆ ಜನರಿಗೆ ನೆರವಾಗಲು ಶೌರ್ಯ ಘಟಕದ ಸದಸ್ಯರು ಹಿಂಜರಿಯಬಾರದು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ಹೇಳಿದರು.</p>.<p>ಇಲ್ಲಿನ ಟ್ರಸ್ಟ್ ಕಚೇರಿಯಲ್ಲಿ ಈಚೆಗೆ ತಾಲ್ಲೂಕಿನ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳೆದ 5 ವರ್ಷಗಳಿಂದ ಕಾರವಾರ ತಾಲ್ಲೂಕಿನಲ್ಲಿ ಶೌರ್ಯ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲದ ವೇಳೆ ಅನಾಹುತಗಳು ಸಂಭವಿಸುವುದು ಹೆಚ್ಚು. ಈ ಬಗ್ಗೆ ಸ್ವಯಂಸೇವಕರು ಮುಂಜಾಗ್ರತೆ ಕ್ರಮವಹಿಸಬೇಕು’ ಎಂದರು.</p>.<p>ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ‘ಘಟಕಗಳ ಬಲವರ್ಧನೆಗೆ ಪೂರಕವಾಗಿ ಎಲ್ಲರಲ್ಲಿಯೂ ಸೇವಾ ಮನೋ ಭಾವದೊಂದಿಗೆ ಸಮಾಜಮುಖಿ ಕಾಳಜಿ ಇರಬೇಕು’ ಎಂದರು.</p>.<p>ತಾಲ್ಲೂಕು ಯೋಜನಾಧಿಕಾರಿ ಶಿವರಾಜ್ ವಿ.ಆಚಾರ್ಯ ಶೌರ್ಯ ಸಮಿತಿಯ ಕಾರ್ಯವೈಖರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ಉದಯ್, ರಾಮ ಸೋಮ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-619544246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>