<p><strong>ಕಾರವಾರ</strong>: ಔಷಧಗಳ ಆನ್ಲೈನ್ ಮಾರಾಟ ಸ್ಥಗಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯ ಮೇರೆಗೆ ಜಿಲ್ಲೆಯಲ್ಲಿ ಬುಧವಾರ ಔಷಧ ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.</p>.<p>‘ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 450ಕ್ಕೂ ಹೆಚ್ಚು ಔಷಧ ಮಳಿಗೆಗಳು ದಿನವಿಡೀ ಬಾಗಿಲು ಮುಚ್ಚಲಿವೆ. ಔಷಧ ವರ್ತಕರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆಸಲಾಗುತ್ತಿದೆ. ಮುಷ್ಕರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಬಹುದು. ಆದರೆ, ವ್ಯಾಪಾರಿಗಳ ಹಿತದೃಷ್ಟಿಯಿಂದ ಹೋರಾಟ ಅನಿವಾರ್ಯವಾಗಿದೆ’ ಎಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವಿದಾಸ ಪ್ರಭು ಹೇಳಿದ್ದಾರೆ.</p>.<p>‘ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಬೇಡಿಕೆಗಳ ಮಾಹಿತಿಯುಳ್ಳ ಮನವಿ ಪತ್ರವನ್ನು ಆಯಾ ತಹಶೀಲ್ದಾರ್ಗಳಿಗೆ ಸಲ್ಲಿಸಲಾಗುತ್ತದೆ. ಅಂಗಡಿ ಬಾಗಿಲು ಮುಚ್ಚುವುದರ ಹೊರತಾಗಿ ತೀವ್ರಸ್ವರೂಪದ ಪ್ರತಿಭಟನೆಯನ್ನು ಜಿಲ್ಲೆಯಲ್ಲಿ ನಡೆಸುತ್ತಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಔಷಧ ಮಳಿಗೆಗಳ ಮುಷ್ಕರ ಇದ್ದರೂ ಮೆಡ್ಪ್ಲಸ್, ಅಪೋಲೊ, ಜನೌಷಧಿ ಮಳಿಗೆಗಳು, ಕ್ಲಿನಿಕ್, ನರ್ಸಿಂಗ್ ಹೋಂಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ತೆರೆದುಕೊಂಡಿರಲಿವೆ’ ಎಂದು ಜಿಲ್ಲಾ ಔಷಧ ನಿಯಂತ್ರಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-20-731089928</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಔಷಧಗಳ ಆನ್ಲೈನ್ ಮಾರಾಟ ಸ್ಥಗಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯ ಮೇರೆಗೆ ಜಿಲ್ಲೆಯಲ್ಲಿ ಬುಧವಾರ ಔಷಧ ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.</p>.<p>‘ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 450ಕ್ಕೂ ಹೆಚ್ಚು ಔಷಧ ಮಳಿಗೆಗಳು ದಿನವಿಡೀ ಬಾಗಿಲು ಮುಚ್ಚಲಿವೆ. ಔಷಧ ವರ್ತಕರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆಸಲಾಗುತ್ತಿದೆ. ಮುಷ್ಕರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಬಹುದು. ಆದರೆ, ವ್ಯಾಪಾರಿಗಳ ಹಿತದೃಷ್ಟಿಯಿಂದ ಹೋರಾಟ ಅನಿವಾರ್ಯವಾಗಿದೆ’ ಎಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವಿದಾಸ ಪ್ರಭು ಹೇಳಿದ್ದಾರೆ.</p>.<p>‘ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಬೇಡಿಕೆಗಳ ಮಾಹಿತಿಯುಳ್ಳ ಮನವಿ ಪತ್ರವನ್ನು ಆಯಾ ತಹಶೀಲ್ದಾರ್ಗಳಿಗೆ ಸಲ್ಲಿಸಲಾಗುತ್ತದೆ. ಅಂಗಡಿ ಬಾಗಿಲು ಮುಚ್ಚುವುದರ ಹೊರತಾಗಿ ತೀವ್ರಸ್ವರೂಪದ ಪ್ರತಿಭಟನೆಯನ್ನು ಜಿಲ್ಲೆಯಲ್ಲಿ ನಡೆಸುತ್ತಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಔಷಧ ಮಳಿಗೆಗಳ ಮುಷ್ಕರ ಇದ್ದರೂ ಮೆಡ್ಪ್ಲಸ್, ಅಪೋಲೊ, ಜನೌಷಧಿ ಮಳಿಗೆಗಳು, ಕ್ಲಿನಿಕ್, ನರ್ಸಿಂಗ್ ಹೋಂಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ತೆರೆದುಕೊಂಡಿರಲಿವೆ’ ಎಂದು ಜಿಲ್ಲಾ ಔಷಧ ನಿಯಂತ್ರಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-20-731089928</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>