ಕಾಮಗಾರಿಯನ್ನು ವಿರೋಧಿಸಿ ಮೀನುಗಾರರು ಗುರುವಾರ ಕರೆ ನೀಡಿದ್ದ ಕಾರವಾರ ಬಂದ್ ಹಾಗೂ ಪ್ರತಿಭಟನಾ ಮೆರವಣಿಗೆಯ ಸಂದರ್ಭ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಮೀನುಗಾರಿಕಾ ಮತ್ತು ಬಂದರು ಇಲಾಖೆ ಸಚಿವರು ಬೆಂಗಳೂರಿನಲ್ಲಿ ಸ್ಥಳೀಯ ಮೀನುಗಾರರಮುಖಂಡರು ಮತ್ತು ತಜ್ಞರೊಂದಿಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.