<p><strong>ಕಾರವಾರ</strong>: ಇಲ್ಲಿನ ಸಾಯಿಕಟ್ಟಾದ ಸಾಯಿಮಂದಿರಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ.</p><p>‘ಸಾಯಿಬಾಬಾ ಪೀಠದ ಬೆಳ್ಳಿಯ ಪ್ರಭಾವಳಿ, ಬೆಳ್ಳಿಯ ಪಾದುಕೆ ಸೇರಿದಂತೆ ಸುಮಾರು 12 ಕೆ.ಜಿಗೂ ಅಧಿಕ ಬೆಳ್ಳಿ ಸಾಮಗ್ರಿ ಕಳವು ಮಾಡಲಾಗಿದೆ’ ಎಂದು ನಗರಠಾಣೆ ಪೊಲೀಸರು ತಿಳಿಸಿದ್ದಾರೆ.</p>. <p>‘ಕಳವು ಮಾಡಿರುವ ದೃಶ್ಯಗಳು ದೇವಾಲಯದಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ಇಬ್ಬರು ಆಗಂತುಕರು ಈ ಕೃತ್ಯ ಎಸಗಿರುವುದು ದೃಶ್ಯದಲ್ಲಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದೂ ಹೇಳಿದರು.</p><p>ಕೆಲ ತಿಂಗಳುಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ–66ರ ಪಕ್ಕದಲ್ಲೇ ಇರುವ, ತಾಲ್ಲೂಕಿನ ಅಮದಳ್ಳಿಯ ವೀರಗಣಪತಿ ದೇವಾಲಯದ ದೇವರ ಬೆಳ್ಳಿ ಕವಚ ಕಳವು ಮಾಡಲಾಗಿತ್ತು. ಈವರೆಗೆ ಆರೋಪಿಗಳ ಪತ್ತೆಯಾಗಿಲ್ಲ.</p><p>‘ದೇವಾಲಯಗಳಿಗೆ ನುಗ್ಗಿ ಬೆಳ್ಳಿ ಆಭರಣ ಕಳವು ಮಾಡುವುದನ್ನೇ ಕಸುಬಾಗಿಸಿಕೊಂಡವರಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಹಿಂದಿನ ಕಳವು ಪ್ರಕರಣಗಳಲ್ಲಿ ಭಾಗಿಯಾದವರೇ ಕಳವು ನಡೆಸಿರುವ ಸಾಧ್ಯತೆ ಇದೆ’ ಎಂದೂ ಪೊಲೀಸರು ಶಂಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಇಲ್ಲಿನ ಸಾಯಿಕಟ್ಟಾದ ಸಾಯಿಮಂದಿರಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ.</p><p>‘ಸಾಯಿಬಾಬಾ ಪೀಠದ ಬೆಳ್ಳಿಯ ಪ್ರಭಾವಳಿ, ಬೆಳ್ಳಿಯ ಪಾದುಕೆ ಸೇರಿದಂತೆ ಸುಮಾರು 12 ಕೆ.ಜಿಗೂ ಅಧಿಕ ಬೆಳ್ಳಿ ಸಾಮಗ್ರಿ ಕಳವು ಮಾಡಲಾಗಿದೆ’ ಎಂದು ನಗರಠಾಣೆ ಪೊಲೀಸರು ತಿಳಿಸಿದ್ದಾರೆ.</p>. <p>‘ಕಳವು ಮಾಡಿರುವ ದೃಶ್ಯಗಳು ದೇವಾಲಯದಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ಇಬ್ಬರು ಆಗಂತುಕರು ಈ ಕೃತ್ಯ ಎಸಗಿರುವುದು ದೃಶ್ಯದಲ್ಲಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದೂ ಹೇಳಿದರು.</p><p>ಕೆಲ ತಿಂಗಳುಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ–66ರ ಪಕ್ಕದಲ್ಲೇ ಇರುವ, ತಾಲ್ಲೂಕಿನ ಅಮದಳ್ಳಿಯ ವೀರಗಣಪತಿ ದೇವಾಲಯದ ದೇವರ ಬೆಳ್ಳಿ ಕವಚ ಕಳವು ಮಾಡಲಾಗಿತ್ತು. ಈವರೆಗೆ ಆರೋಪಿಗಳ ಪತ್ತೆಯಾಗಿಲ್ಲ.</p><p>‘ದೇವಾಲಯಗಳಿಗೆ ನುಗ್ಗಿ ಬೆಳ್ಳಿ ಆಭರಣ ಕಳವು ಮಾಡುವುದನ್ನೇ ಕಸುಬಾಗಿಸಿಕೊಂಡವರಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಹಿಂದಿನ ಕಳವು ಪ್ರಕರಣಗಳಲ್ಲಿ ಭಾಗಿಯಾದವರೇ ಕಳವು ನಡೆಸಿರುವ ಸಾಧ್ಯತೆ ಇದೆ’ ಎಂದೂ ಪೊಲೀಸರು ಶಂಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>