<p>ಕಾರವಾರ: ‘ತಾಲ್ಲೂಕಿನ ಶೇಜವಾಡದಲ್ಲಿರುವ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಏ.13ರಂದು ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ’ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪೂರ್ಣ ಶಿಲಾಮಯ ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ’ ಎಂದರು.</p>.<p>ದೇವಸ್ಥಾನದ ಅರ್ಚಕ ಮಂದಾರ ಮೊಘೆ, ‘ಪಂಚಕ್ಷೇತ್ರಗಳಲ್ಲಿ ಒಂದಾಗಿರುವ ಶೆಜ್ಜೇಶ್ವರ ದೇವಸ್ಥಾನ ಪುನರ್ ನಿರ್ಮಾಣದ ಶಿಲಾನ್ಯಾಸಕ್ಕೆ ಮುನ್ನ ಹೋಮ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನ ನಾಗರ ಶೈಲಿ, ಕೇರಳೀಯ ಶೈಲಿಯಲ್ಲಿ ನಿರ್ಮಾಣ ಆಗಲಿದೆ’ ಎಂದರು.</p>.<p>ಸಮಿತಿ ಅಧ್ಯಕ್ಷ ಸಮೀರ ನಾಯ್ಕ, ‘ದೇವಸ್ಥಾನ ನಿರ್ಮಾಣಕ್ಕೆ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಶಾಸಕ ಸತೀಶ ಸೈಲ್ ಮೊದಲ ಹಂತದಲ್ಲಿ ₹7 ಕೋಟಿ ಅನುದಾನವನ್ನು ಸರ್ಕಾರದಿಂದ ಒದಗಿಸಿದ್ದಾರೆ. ಎರಡನೇ ಹಂತದಲ್ಲಿ ₹10 ಕೋಟಿಗೆ ಆಡಳಿತಾತ್ಮಕ ಅನುಮೋದನೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಗ್ರಾಮದ ಪ್ರತಿ ಮನೆಗಳಿಂದ ಕನಿಷ್ಠ ₹11 ಸಾವಿರ ದೇಣಿಗೆ ನೀಡಲು ಗ್ರಾಮಸ್ಥರು ಒಪ್ಪಿದ್ದಾರೆ. ಹಲವರು ಬೇರೆ ಬೇರೆ ಸೌಕರ್ಯಗಳನ್ನೂ ಒದಗಿಸಲು ಮುಂದೆ ಬಂದಿದ್ದಾರೆ’ ಎಂದರು.</p>.<p>ಸಮಿತಿ ಸದಸ್ಯರಾದ ಆತ್ಮಾರಾಮ ಶೇಜವಾಡಕರ, ಎಲ್.ಕೆ.ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-117103613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ತಾಲ್ಲೂಕಿನ ಶೇಜವಾಡದಲ್ಲಿರುವ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಏ.13ರಂದು ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ’ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪೂರ್ಣ ಶಿಲಾಮಯ ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ’ ಎಂದರು.</p>.<p>ದೇವಸ್ಥಾನದ ಅರ್ಚಕ ಮಂದಾರ ಮೊಘೆ, ‘ಪಂಚಕ್ಷೇತ್ರಗಳಲ್ಲಿ ಒಂದಾಗಿರುವ ಶೆಜ್ಜೇಶ್ವರ ದೇವಸ್ಥಾನ ಪುನರ್ ನಿರ್ಮಾಣದ ಶಿಲಾನ್ಯಾಸಕ್ಕೆ ಮುನ್ನ ಹೋಮ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನ ನಾಗರ ಶೈಲಿ, ಕೇರಳೀಯ ಶೈಲಿಯಲ್ಲಿ ನಿರ್ಮಾಣ ಆಗಲಿದೆ’ ಎಂದರು.</p>.<p>ಸಮಿತಿ ಅಧ್ಯಕ್ಷ ಸಮೀರ ನಾಯ್ಕ, ‘ದೇವಸ್ಥಾನ ನಿರ್ಮಾಣಕ್ಕೆ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಶಾಸಕ ಸತೀಶ ಸೈಲ್ ಮೊದಲ ಹಂತದಲ್ಲಿ ₹7 ಕೋಟಿ ಅನುದಾನವನ್ನು ಸರ್ಕಾರದಿಂದ ಒದಗಿಸಿದ್ದಾರೆ. ಎರಡನೇ ಹಂತದಲ್ಲಿ ₹10 ಕೋಟಿಗೆ ಆಡಳಿತಾತ್ಮಕ ಅನುಮೋದನೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಗ್ರಾಮದ ಪ್ರತಿ ಮನೆಗಳಿಂದ ಕನಿಷ್ಠ ₹11 ಸಾವಿರ ದೇಣಿಗೆ ನೀಡಲು ಗ್ರಾಮಸ್ಥರು ಒಪ್ಪಿದ್ದಾರೆ. ಹಲವರು ಬೇರೆ ಬೇರೆ ಸೌಕರ್ಯಗಳನ್ನೂ ಒದಗಿಸಲು ಮುಂದೆ ಬಂದಿದ್ದಾರೆ’ ಎಂದರು.</p>.<p>ಸಮಿತಿ ಸದಸ್ಯರಾದ ಆತ್ಮಾರಾಮ ಶೇಜವಾಡಕರ, ಎಲ್.ಕೆ.ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-117103613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>