<p>ಕಾರವಾರ: ಆತ್ಮಲಿಂಗ ಇರುವ ಪಂಚಕ್ಷೇತ್ರಗಳಲ್ಲಿ ಒಂದೆನಿಸಿರುವ ತಾಲ್ಲೂಕಿನ ಶೇಜವಾಡದ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಸೋಮವಾರ ಶಿಲಾನ್ಯಾಸ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.</p>.<p>ಬೆಳಿಗ್ಗೆ 11.50ರ ಮಿಥುನ ಲಗ್ನದ ಮುಹೂರ್ತದಲ್ಲಿ ದೇವಸ್ಥಾನದ ಹೊಸ ಕಟ್ಟಡ ನಿರ್ಮಾಣಕ್ಕೆ ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ಸತೀಶ ಸೈಲ್ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ದೇವಸ್ಥಾನದ ಆವರಣದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕೆಲಸ ನಡೆದಿದೆ.</p>.<p>ದೇವಸ್ಥಾನದ ಗರ್ಭಗುಡಿ ನಿರ್ಮಾಣಗೊಳ್ಳಲಿರುವ ಜಾಗಕ್ಕೆ ಅಡಿಪಾಯ ನಿರ್ಮಿಸಿ, ಶಿಲಾನ್ಯಾಸ ನಡೆಸಲು ಜಾಗ ನಿರ್ಮಾಣ ಮಾಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಂಪೂರ್ಣ ಶಿಲಾಮಯವಾದ ದೇವಸ್ಥಾನ ನಿರ್ಮಿಸುವ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ತಿಳಿಸಿದರು.</p>.<p>‘ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ನಾಗರ ಮತ್ತು ಕೇರಳ ಶೈಲಿಯಲ್ಲಿ ಸಂಪೂರ್ಣ ಕಲ್ಲು, ತಾಮ್ರ ಬಳಸಿ ದೇವಸ್ಥಾನ ನಿರ್ಮಾಣ ನಡೆಯಲಿದೆ. ಇದಕ್ಕಾಗಿ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರದಿಂದ ₹18 ಕೋಟಿ ಅನುದಾನ ಬಿಡುಗಡೆಯ ಭರವಸೆ ಸಿಕ್ಕಿದೆ’ ಎಂದು ಸಮಿತಿ ಅಧ್ಯಕ್ಷ ಸಮೀರ ನಾಯ್ಕ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-20-70653765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಆತ್ಮಲಿಂಗ ಇರುವ ಪಂಚಕ್ಷೇತ್ರಗಳಲ್ಲಿ ಒಂದೆನಿಸಿರುವ ತಾಲ್ಲೂಕಿನ ಶೇಜವಾಡದ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಸೋಮವಾರ ಶಿಲಾನ್ಯಾಸ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.</p>.<p>ಬೆಳಿಗ್ಗೆ 11.50ರ ಮಿಥುನ ಲಗ್ನದ ಮುಹೂರ್ತದಲ್ಲಿ ದೇವಸ್ಥಾನದ ಹೊಸ ಕಟ್ಟಡ ನಿರ್ಮಾಣಕ್ಕೆ ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ಸತೀಶ ಸೈಲ್ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ದೇವಸ್ಥಾನದ ಆವರಣದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕೆಲಸ ನಡೆದಿದೆ.</p>.<p>ದೇವಸ್ಥಾನದ ಗರ್ಭಗುಡಿ ನಿರ್ಮಾಣಗೊಳ್ಳಲಿರುವ ಜಾಗಕ್ಕೆ ಅಡಿಪಾಯ ನಿರ್ಮಿಸಿ, ಶಿಲಾನ್ಯಾಸ ನಡೆಸಲು ಜಾಗ ನಿರ್ಮಾಣ ಮಾಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಂಪೂರ್ಣ ಶಿಲಾಮಯವಾದ ದೇವಸ್ಥಾನ ನಿರ್ಮಿಸುವ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ತಿಳಿಸಿದರು.</p>.<p>‘ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ನಾಗರ ಮತ್ತು ಕೇರಳ ಶೈಲಿಯಲ್ಲಿ ಸಂಪೂರ್ಣ ಕಲ್ಲು, ತಾಮ್ರ ಬಳಸಿ ದೇವಸ್ಥಾನ ನಿರ್ಮಾಣ ನಡೆಯಲಿದೆ. ಇದಕ್ಕಾಗಿ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರದಿಂದ ₹18 ಕೋಟಿ ಅನುದಾನ ಬಿಡುಗಡೆಯ ಭರವಸೆ ಸಿಕ್ಕಿದೆ’ ಎಂದು ಸಮಿತಿ ಅಧ್ಯಕ್ಷ ಸಮೀರ ನಾಯ್ಕ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-20-70653765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>