<p><strong>ಕಾರವಾರ:</strong> ಕೆಲವೇ ದಿನಗಳಲ್ಲಿ ಮಂಡನೆಯಾಗಲಿರುವ ರಾಜ್ಯ ಸರ್ಕಾರದ ಬಜೆಟ್ ತಯಾರಿಕೆಗೆ ಪೂರಕವಾಗಿ ಜಿಲ್ಲೆಯಿಂದ ವಿವಿಧ ಅಭಿವೃದ್ಧಿ ಯೋಜನೆಗೆ ₹13,800 ಕೋಟಿ ಮೊತ್ತದ ಪ್ರಸ್ತಾವ ಸಲ್ಲಿಕೆಯಾಗಿದೆ.</p>.<p>ನಗರ ಸ್ಥಳೀಯ ಸಂಸ್ಥೆಗಳು ₹3,671 ಕೋಟಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ₹247 ಕೋಟಿ ಪ್ರಸ್ತಾವನೆ ಸಲ್ಲಿಸಿವೆ. ಒಟ್ಟು 46 ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಯೋಜನೆಗೆ ₹405 ಕೋಟಿ, ಪರಿಶಿಷ್ಟ ಪಂಡಗಕ್ಕೆ ₹262 ಕೋಟಿ ಮೀಸಲಿಡಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜಿಲ್ಲಾ ಯೋಜನಾ ಸಮಿತಿ ವಿವಿಧ ಇಲಾಖೆಗಳ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಈ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ತರಾತುರಿಯಲ್ಲಿ ಯೋಜನಾ ಸಮಿತಿ ಸಭೆ ನಡೆದಿತ್ತು. ರಾಜ್ಯ ಸರ್ಕಾರ ನೀಡಿದ ಅಂತಿಮ ಗಡುವಿನ ಕೊನೆ ಕ್ಷಣದಲ್ಲಿ ಸಭೆ ನಡೆಸಿ, ಪ್ರಸ್ತಾವ ಸಲ್ಲಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘2026–27ನೇ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ವಿವಿಧ ಇಲಾಖೆಯಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅನುದಾನದ ಬೇಡಿಕೆ ಪ್ರಸ್ತಾವದಲ್ಲಿದೆ. ಗ್ರಾಮೀಣ, ನಗರ ಪ್ರದೇಶದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ, ಹೊಸ ಯೋಜನೆಗಳಿಗೆ ಪೂರಕವಾದ ಅಂಶಗಳನ್ನೂ ಅದು ಒಳಗೊಂಡಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಸರ್ಕಾರ ಬಜೆಟ್ ತಯಾರಿಕೆಗೆ ಜಿಲ್ಲಾಮಟ್ಟದ ಪ್ರಸ್ತಾವ ಪರಿಗಣಿಸಿದ್ದು ಅಪರೂಪ. ಅದರಲ್ಲಿಯೂ ಜಿಲ್ಲಾ ಯೋಜನಾ ಸಮಿತಿ ಸಲ್ಲಿಸುವ ಕರಡು ಪ್ರಸ್ತಾವಗಳನ್ನು ಪರಿಗಣಿಸಿದ ಉದಾಹರಣೆಗಳು ಕಡಿಮೆ. ಆದರೆ, ಈ ಬಾರಿ ಬಜೆಟ್ ತಯಾರಿಕೆಗೆ ಮುನ್ನವೇ ಸರ್ಕಾರದಮಟ್ಟದಿಂದ ಪ್ರಸ್ತಾವ ಸಲ್ಲಿಸಲು ಸೂಚನೆ ಬಂದಿತ್ತು’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ ನಡೆದ ಗ್ರಾಮ ಸಭೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಮಾನ್ಯ ಸಭೆಗಳಲ್ಲಿ ಸಲ್ಲಿಸಲಾದ ಬೇಡಿಕೆಗಳನ್ನು ಕ್ರೋಢೀಕರಿಸಿ ಜಿಲ್ಲಾ ಹಂತದಲ್ಲಿ ಉಸ್ತುವಾರಿ ಸಚಿವರ ಅಧ್ಯಕ್ಷರು ಸಭೆ ನಡೆಸಿದ್ದರು. ಈ ಕರಡು ಪ್ರಸ್ತಾವವನ್ನು ರಾಜ್ಯ ಪಂಚಾಯತ ರಾಜ್ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರು ಈಚೆಗೆ ಶಿರಸಿಯಲ್ಲಿ ನಡೆಸಿದ ಸಭೆಯಲ್ಲಿ ವಿಶ್ಲೇಷಿಸಿ ಅನುಮೋದಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಕೆಲವೇ ದಿನಗಳಲ್ಲಿ ಮಂಡನೆಯಾಗಲಿರುವ ರಾಜ್ಯ ಸರ್ಕಾರದ ಬಜೆಟ್ ತಯಾರಿಕೆಗೆ ಪೂರಕವಾಗಿ ಜಿಲ್ಲೆಯಿಂದ ವಿವಿಧ ಅಭಿವೃದ್ಧಿ ಯೋಜನೆಗೆ ₹13,800 ಕೋಟಿ ಮೊತ್ತದ ಪ್ರಸ್ತಾವ ಸಲ್ಲಿಕೆಯಾಗಿದೆ.</p>.<p>ನಗರ ಸ್ಥಳೀಯ ಸಂಸ್ಥೆಗಳು ₹3,671 ಕೋಟಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ₹247 ಕೋಟಿ ಪ್ರಸ್ತಾವನೆ ಸಲ್ಲಿಸಿವೆ. ಒಟ್ಟು 46 ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಯೋಜನೆಗೆ ₹405 ಕೋಟಿ, ಪರಿಶಿಷ್ಟ ಪಂಡಗಕ್ಕೆ ₹262 ಕೋಟಿ ಮೀಸಲಿಡಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜಿಲ್ಲಾ ಯೋಜನಾ ಸಮಿತಿ ವಿವಿಧ ಇಲಾಖೆಗಳ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಈ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ತರಾತುರಿಯಲ್ಲಿ ಯೋಜನಾ ಸಮಿತಿ ಸಭೆ ನಡೆದಿತ್ತು. ರಾಜ್ಯ ಸರ್ಕಾರ ನೀಡಿದ ಅಂತಿಮ ಗಡುವಿನ ಕೊನೆ ಕ್ಷಣದಲ್ಲಿ ಸಭೆ ನಡೆಸಿ, ಪ್ರಸ್ತಾವ ಸಲ್ಲಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘2026–27ನೇ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ವಿವಿಧ ಇಲಾಖೆಯಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅನುದಾನದ ಬೇಡಿಕೆ ಪ್ರಸ್ತಾವದಲ್ಲಿದೆ. ಗ್ರಾಮೀಣ, ನಗರ ಪ್ರದೇಶದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ, ಹೊಸ ಯೋಜನೆಗಳಿಗೆ ಪೂರಕವಾದ ಅಂಶಗಳನ್ನೂ ಅದು ಒಳಗೊಂಡಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಸರ್ಕಾರ ಬಜೆಟ್ ತಯಾರಿಕೆಗೆ ಜಿಲ್ಲಾಮಟ್ಟದ ಪ್ರಸ್ತಾವ ಪರಿಗಣಿಸಿದ್ದು ಅಪರೂಪ. ಅದರಲ್ಲಿಯೂ ಜಿಲ್ಲಾ ಯೋಜನಾ ಸಮಿತಿ ಸಲ್ಲಿಸುವ ಕರಡು ಪ್ರಸ್ತಾವಗಳನ್ನು ಪರಿಗಣಿಸಿದ ಉದಾಹರಣೆಗಳು ಕಡಿಮೆ. ಆದರೆ, ಈ ಬಾರಿ ಬಜೆಟ್ ತಯಾರಿಕೆಗೆ ಮುನ್ನವೇ ಸರ್ಕಾರದಮಟ್ಟದಿಂದ ಪ್ರಸ್ತಾವ ಸಲ್ಲಿಸಲು ಸೂಚನೆ ಬಂದಿತ್ತು’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<p>‘ಗ್ರಾಮ ಪಂಚಾಯಿತಿಗಳಲ್ಲಿ ನಡೆದ ಗ್ರಾಮ ಸಭೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಮಾನ್ಯ ಸಭೆಗಳಲ್ಲಿ ಸಲ್ಲಿಸಲಾದ ಬೇಡಿಕೆಗಳನ್ನು ಕ್ರೋಢೀಕರಿಸಿ ಜಿಲ್ಲಾ ಹಂತದಲ್ಲಿ ಉಸ್ತುವಾರಿ ಸಚಿವರ ಅಧ್ಯಕ್ಷರು ಸಭೆ ನಡೆಸಿದ್ದರು. ಈ ಕರಡು ಪ್ರಸ್ತಾವವನ್ನು ರಾಜ್ಯ ಪಂಚಾಯತ ರಾಜ್ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರು ಈಚೆಗೆ ಶಿರಸಿಯಲ್ಲಿ ನಡೆಸಿದ ಸಭೆಯಲ್ಲಿ ವಿಶ್ಲೇಷಿಸಿ ಅನುಮೋದಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>