<p><strong>ಕಾರವಾರ</strong>: ತಾಲ್ಲೂಕಿನ ಕದ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಕೊರಳಿಗೆ ರೇಡಿಯಂ ಪಟ್ಟಿ ಕಟ್ಟುವ ಕಾರ್ಯ ನಡೆದಿದೆ.</p>.<p>ಸದಾಶಿವಗಡ–ಔರಾದ್ ರಾಜ್ಯ ಹೆದ್ದಾರಿ–34ರಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೀಡಾಡಿ ದನಗಳು ಬೀಡುಬಿಡುತ್ತಿದ್ದು, ವಾಹನಗಳ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಕದ್ರಾ ಠಾಣೆಯ ಸಿಬ್ಬಂದಿ ಬೀಡಾಡಿ ದನಗಳ ಕೊರಳಿಗೆ ರಾತ್ರಿ ವೇಳೆ ಹೊಳೆಯುವ ರೇಡಿಯಂ ಪಟ್ಟಿಗಳನ್ನು ಕಟ್ಟುವ ಕೆಲಸ ನಡೆಸಿದರು.</p>.<p>ಸಬ್ ಇನ್ಸ್ಪೆಕ್ಟರ್ ಸುನೀಲ ಬಂಡಿವಡ್ಡರ್ ನೇತೃತ್ವದಲ್ಲಿ ಸಿಬ್ಬಂದಿ ಸಾರ್ವಜನಿಕರ ನೆರವು ಪಡೆದು ರಾಜ್ಯ ಹೆದ್ದಾರಿಗಳಲ್ಲಿ ಅಲೆದಾಡುವ ಬೀಡಾಡಿ ದನಗಳ ಕೊರಳಿಗೆ ಪಟ್ಟಿ ಕಟ್ಟಿದರು.</p>.<p>‘ಕಾರವಾರದಿಂದ ಜೊಯಿಡಾ, ದಾಂಡೇಲಿ ಭಾಗಕ್ಕೆ ರಾತ್ರಿ ವೇಳೆಯೂ ವಾಹನಗಳ ಓಡಾಟ ಹೆಚ್ಚಿದೆ. ಈ ರಸ್ತೆಯಲ್ಲಿ ಬೀಡಾಡಿ ದನಗಳು ರಸ್ತೆಯ ಮೇಲೆ ಗುಂಪು ಗುಂಪಾಗಿ ನಿಲ್ಲುತ್ತಿರುವ ದೂರುಗಳಿದ್ದವು. ಅವುಗಳಿಂದ ಅಪಘಾತ ಉಂಟಾಗದಂತೆ, ಬೀಡಾಡಿ ದಿನಗಳಿಗೂ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಪಟ್ಟಿ ಕಟ್ಟಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ಕದ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಕೊರಳಿಗೆ ರೇಡಿಯಂ ಪಟ್ಟಿ ಕಟ್ಟುವ ಕಾರ್ಯ ನಡೆದಿದೆ.</p>.<p>ಸದಾಶಿವಗಡ–ಔರಾದ್ ರಾಜ್ಯ ಹೆದ್ದಾರಿ–34ರಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೀಡಾಡಿ ದನಗಳು ಬೀಡುಬಿಡುತ್ತಿದ್ದು, ವಾಹನಗಳ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಕದ್ರಾ ಠಾಣೆಯ ಸಿಬ್ಬಂದಿ ಬೀಡಾಡಿ ದನಗಳ ಕೊರಳಿಗೆ ರಾತ್ರಿ ವೇಳೆ ಹೊಳೆಯುವ ರೇಡಿಯಂ ಪಟ್ಟಿಗಳನ್ನು ಕಟ್ಟುವ ಕೆಲಸ ನಡೆಸಿದರು.</p>.<p>ಸಬ್ ಇನ್ಸ್ಪೆಕ್ಟರ್ ಸುನೀಲ ಬಂಡಿವಡ್ಡರ್ ನೇತೃತ್ವದಲ್ಲಿ ಸಿಬ್ಬಂದಿ ಸಾರ್ವಜನಿಕರ ನೆರವು ಪಡೆದು ರಾಜ್ಯ ಹೆದ್ದಾರಿಗಳಲ್ಲಿ ಅಲೆದಾಡುವ ಬೀಡಾಡಿ ದನಗಳ ಕೊರಳಿಗೆ ಪಟ್ಟಿ ಕಟ್ಟಿದರು.</p>.<p>‘ಕಾರವಾರದಿಂದ ಜೊಯಿಡಾ, ದಾಂಡೇಲಿ ಭಾಗಕ್ಕೆ ರಾತ್ರಿ ವೇಳೆಯೂ ವಾಹನಗಳ ಓಡಾಟ ಹೆಚ್ಚಿದೆ. ಈ ರಸ್ತೆಯಲ್ಲಿ ಬೀಡಾಡಿ ದನಗಳು ರಸ್ತೆಯ ಮೇಲೆ ಗುಂಪು ಗುಂಪಾಗಿ ನಿಲ್ಲುತ್ತಿರುವ ದೂರುಗಳಿದ್ದವು. ಅವುಗಳಿಂದ ಅಪಘಾತ ಉಂಟಾಗದಂತೆ, ಬೀಡಾಡಿ ದಿನಗಳಿಗೂ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಪಟ್ಟಿ ಕಟ್ಟಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>