<p>ಕಾರವಾರ: ಅಂಕೋಲಾ ತಾಲ್ಲೂಕಿನ ಹಾರವಾಡ ಸಮೀಪದ ತರಂಗಮೇಟ್ ಗ್ರಾಮದಲ್ಲಿ ಕಡಲುಕೊರೆತ ಕಾಮಗಾರಿ ಅಪೂರ್ಣಗೊಂಡಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಗುರುವಾರ ಶಾಸಕ ಸತೀಶ ಸೈಲ್ ಮತ್ತು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ್ದ ಗ್ರಾಮಸ್ಥರು ಕಡಲುಕೊರೆತ ತಡೆಗೆ ಕೈಗೊಂಡ ಕಾಮಗಾರಿ ಅರೆಬರೆಯಾಗಿದೆ. ತಡೆಗೋಡೆ ಮತ್ತು ತೀರದ ನಡುವಿನ ಪ್ರದೇಶದಲ್ಲಿ ಮಣ್ಣು ತುಂಬಿಸುವ ಕೆಲಸವನ್ನೂ ಮಾಡಿಲ್ಲ. ಇದರಿಂದ ಮಳೆಗಾಲದಲ್ಲಿ ಮತ್ತಷ್ಟು ಪ್ರದೇಶ ಹಾನಿಗೆ ಒಳಗಾಗುವ ಆತಂಕವಿದೆ ಎಂದು ದೂರಿದರು.</p>.<p>‘2024ರಲ್ಲಿ ಮಳೆಗಾಲದ ಅವಧಿಯಲ್ಲಿ ಕಡಲುಕೊರೆತದಿಂದ ಸುಮಾರು 500 ಮೀ. ಉದ್ದದ ತೀರ ಪ್ರದೇಶಕ್ಕೆ ಹಾನಿ ಉಂಟಾಗಿತ್ತು. ಇದರಿಂದ ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿದ್ದವು. 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಯಿತು. ಇಂದಿಗೂ ಈ ಕುಟುಂಬಗಳು ಮನೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಕೇವಲ 180 ಮೀ. ಉದ್ದದ ಪ್ರದೇಶಕ್ಕೆ ಮಾತ್ರ ತಡೆಗೋಡೆ ನಿರ್ಮಿಸಲಾಗಿದೆ. ಮಾಡಿದ ಕೆಲಸವೂ ಸರಿಯಾಗಿಲ್ಲ’ ಎಂದು ಸಮಸ್ಯೆ ವಿವರಿಸಿದರು.</p>.<p>ಜನರ ದೂರು ಆಲಿಸಿದ ಶಾಸಕ ಸತೀಶ ಸೈಲ್ ಮಾತನಾಡಿ, ‘ಉಳಿದ ಪ್ರದೇಶಕ್ಕೆ ತಡೆಗೋಡೆ ನಿರ್ಮಿಸಲು, ತಡೆಗೋಡೆಯ ಪಕ್ಕದಲ್ಲಿ ಮಣ್ಣು ತುಂಬಿಸಲು ಮಳೆಗಾಲಕ್ಕೆ ಮುನ್ನ ಕಾಮಗಾರಿ ನಡೆಸಲು ಕ್ರಮವಹಿಸಲಾಗುವುದು’ ಎಂದು ಭರವಸೆ ನೀಡಿದರು. ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.</p>.<p>ಪ್ರಮುಖರಾದ ಕೆ.ಶಂಭು ಶೆಟ್ಟಿ, ಸಮೀರ ನಾಯ್ಕ, ಗ್ರಾಮಸ್ಥರಾದ ಗಣಪತಿ ದುರ್ಗೇಕರ, ರವಿ ಹರಿಕಂತ್ರ, ಸಂತೋಷ ದುರ್ಗೇಕರ, ಸುಭಾಷ ಹರಿಕಂತ್ರ, ಮಹಾಬಲೇಶ್ವರ ತಾಂಡೇಲ, ರಾಜು ತಾಂಡೇಲ, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-20-1082153301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಅಂಕೋಲಾ ತಾಲ್ಲೂಕಿನ ಹಾರವಾಡ ಸಮೀಪದ ತರಂಗಮೇಟ್ ಗ್ರಾಮದಲ್ಲಿ ಕಡಲುಕೊರೆತ ಕಾಮಗಾರಿ ಅಪೂರ್ಣಗೊಂಡಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಗುರುವಾರ ಶಾಸಕ ಸತೀಶ ಸೈಲ್ ಮತ್ತು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ್ದ ಗ್ರಾಮಸ್ಥರು ಕಡಲುಕೊರೆತ ತಡೆಗೆ ಕೈಗೊಂಡ ಕಾಮಗಾರಿ ಅರೆಬರೆಯಾಗಿದೆ. ತಡೆಗೋಡೆ ಮತ್ತು ತೀರದ ನಡುವಿನ ಪ್ರದೇಶದಲ್ಲಿ ಮಣ್ಣು ತುಂಬಿಸುವ ಕೆಲಸವನ್ನೂ ಮಾಡಿಲ್ಲ. ಇದರಿಂದ ಮಳೆಗಾಲದಲ್ಲಿ ಮತ್ತಷ್ಟು ಪ್ರದೇಶ ಹಾನಿಗೆ ಒಳಗಾಗುವ ಆತಂಕವಿದೆ ಎಂದು ದೂರಿದರು.</p>.<p>‘2024ರಲ್ಲಿ ಮಳೆಗಾಲದ ಅವಧಿಯಲ್ಲಿ ಕಡಲುಕೊರೆತದಿಂದ ಸುಮಾರು 500 ಮೀ. ಉದ್ದದ ತೀರ ಪ್ರದೇಶಕ್ಕೆ ಹಾನಿ ಉಂಟಾಗಿತ್ತು. ಇದರಿಂದ ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿದ್ದವು. 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಯಿತು. ಇಂದಿಗೂ ಈ ಕುಟುಂಬಗಳು ಮನೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಕೇವಲ 180 ಮೀ. ಉದ್ದದ ಪ್ರದೇಶಕ್ಕೆ ಮಾತ್ರ ತಡೆಗೋಡೆ ನಿರ್ಮಿಸಲಾಗಿದೆ. ಮಾಡಿದ ಕೆಲಸವೂ ಸರಿಯಾಗಿಲ್ಲ’ ಎಂದು ಸಮಸ್ಯೆ ವಿವರಿಸಿದರು.</p>.<p>ಜನರ ದೂರು ಆಲಿಸಿದ ಶಾಸಕ ಸತೀಶ ಸೈಲ್ ಮಾತನಾಡಿ, ‘ಉಳಿದ ಪ್ರದೇಶಕ್ಕೆ ತಡೆಗೋಡೆ ನಿರ್ಮಿಸಲು, ತಡೆಗೋಡೆಯ ಪಕ್ಕದಲ್ಲಿ ಮಣ್ಣು ತುಂಬಿಸಲು ಮಳೆಗಾಲಕ್ಕೆ ಮುನ್ನ ಕಾಮಗಾರಿ ನಡೆಸಲು ಕ್ರಮವಹಿಸಲಾಗುವುದು’ ಎಂದು ಭರವಸೆ ನೀಡಿದರು. ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.</p>.<p>ಪ್ರಮುಖರಾದ ಕೆ.ಶಂಭು ಶೆಟ್ಟಿ, ಸಮೀರ ನಾಯ್ಕ, ಗ್ರಾಮಸ್ಥರಾದ ಗಣಪತಿ ದುರ್ಗೇಕರ, ರವಿ ಹರಿಕಂತ್ರ, ಸಂತೋಷ ದುರ್ಗೇಕರ, ಸುಭಾಷ ಹರಿಕಂತ್ರ, ಮಹಾಬಲೇಶ್ವರ ತಾಂಡೇಲ, ರಾಜು ತಾಂಡೇಲ, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-20-1082153301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>