<p><strong>ಯಲ್ಲಾಪುರ</strong>: ‘ಸೆಟ್ಲೈಟ್ ಚಿತ್ರಣ ಆಧಾರಿತ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿಯಲ್ಲಿ ಗುರುತಿಸಿದ ಅತೀ ಸೂಕ್ಷ್ಮ ಪರಿಸರ ಪ್ರದೇಶವು ಅವೈಜ್ಞಾನಿಕವಾಗಿದ್ದು ಈ ವರದಿಯನ್ನು ತಿರಸ್ಕರಿಸಬೇಕು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p> ಪಟ್ಟಣದ ವೆಂಕಟ್ರಮಣ ದೇವಸ್ಥಾನದಲ್ಲಿ ಭಾನುವಾರ ನಡೆದ ಕಸ್ತೂರಿ ರಂಗನ್ ವಿರೋಧಿ ಜಾಥಾದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ʻವರದಿ ತಯಾರಿಸುವಾಗ ಜನಾಭಿಪ್ರಾಯ ಅಥವಾ ಭೌತಿಕ ಸರ್ವೆ ಮಾಡಿ ವಿಷಯ ಸಂಗ್ರಹಿಸಿಲ್ಲ. ಪಶ್ಚಿಮಘಟ್ಟ ಪ್ರದೇಶದ ರಕ್ಷಣೆಗೆ ಈಗಾಗಗಲೇ ಕಾನೂನು ಅಸ್ತಿತ್ವದಲ್ಲಿದೆ. ಹೊಸಮಾನದಂಡದ ಅವಶ್ಯಕತೆ ಇಲ್ಲ’ ಎಂದರು.</p>.<p>ಪ್ರಮುಖರಾದ ಭೀಮ್ಸಿ ವಾಲ್ಮೀಕಿ, ಮಹಾಬಲೇಶ್ವರ ಭಟ್ಟ, ನಾಗರಾಜ ಮರಾಠಿ ಆನಗೋಡ, ನೂರ್ ಅಮ್ಮದ್ ಮದನೂರು, ಸುಬ್ರಾಯ ಭಟ್, ನರಸಿಂಹ ನಾಯ್ಕ ಕುಂದರಗಿ, ಸೀತಾರಾಮ ನಾಯ್ಕ ಕುಂದರಗಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ‘ಸೆಟ್ಲೈಟ್ ಚಿತ್ರಣ ಆಧಾರಿತ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿಯಲ್ಲಿ ಗುರುತಿಸಿದ ಅತೀ ಸೂಕ್ಷ್ಮ ಪರಿಸರ ಪ್ರದೇಶವು ಅವೈಜ್ಞಾನಿಕವಾಗಿದ್ದು ಈ ವರದಿಯನ್ನು ತಿರಸ್ಕರಿಸಬೇಕು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p> ಪಟ್ಟಣದ ವೆಂಕಟ್ರಮಣ ದೇವಸ್ಥಾನದಲ್ಲಿ ಭಾನುವಾರ ನಡೆದ ಕಸ್ತೂರಿ ರಂಗನ್ ವಿರೋಧಿ ಜಾಥಾದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ʻವರದಿ ತಯಾರಿಸುವಾಗ ಜನಾಭಿಪ್ರಾಯ ಅಥವಾ ಭೌತಿಕ ಸರ್ವೆ ಮಾಡಿ ವಿಷಯ ಸಂಗ್ರಹಿಸಿಲ್ಲ. ಪಶ್ಚಿಮಘಟ್ಟ ಪ್ರದೇಶದ ರಕ್ಷಣೆಗೆ ಈಗಾಗಗಲೇ ಕಾನೂನು ಅಸ್ತಿತ್ವದಲ್ಲಿದೆ. ಹೊಸಮಾನದಂಡದ ಅವಶ್ಯಕತೆ ಇಲ್ಲ’ ಎಂದರು.</p>.<p>ಪ್ರಮುಖರಾದ ಭೀಮ್ಸಿ ವಾಲ್ಮೀಕಿ, ಮಹಾಬಲೇಶ್ವರ ಭಟ್ಟ, ನಾಗರಾಜ ಮರಾಠಿ ಆನಗೋಡ, ನೂರ್ ಅಮ್ಮದ್ ಮದನೂರು, ಸುಬ್ರಾಯ ಭಟ್, ನರಸಿಂಹ ನಾಯ್ಕ ಕುಂದರಗಿ, ಸೀತಾರಾಮ ನಾಯ್ಕ ಕುಂದರಗಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>