ಮುಂಗಾರು ಹಂಗಾಮಿನ ಫಸಲ್ ಬಿಮಾ ಯೋಜನೆಯಡಿ ಭತ್ತ ಬೆಳೆಗೆ ₹ 19.30 ಕೋಟಿ, ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆಗೆ ₹ 36.31 ಕೋಟಿ ವಿಮಾ ಮೊತ್ತ ರೈತರ ಖಾತೆಗೆ ಜಮಾ ಆಗಿದೆ ಎಂದು ಹೇಳಿದರು. ಬ್ಯಾಂಕಿನ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ, ನಿರ್ದೇಶಕರಾದ ಜಿ.ಟಿ.ಹೆಗಡೆ ತಟ್ಟೀಸರ, ಜಿ.ಆರ್.ಹೆಗಡೆ ಸೋಂದಾ, ಮೋಹನದಾಸ ನಾಯಕ, ವ್ಯವಸ್ಥಾಪಕ ನಿರ್ದೇಶಕ ಎಸ್.ಪಿ.ಬಾಂದುರ್ಗಿ ಇದ್ದರು.