<p><strong>ಶಿರಸಿ: </strong>ರಾಜ್ಯದ 21 ಜಿಲ್ಲಾ ಮಧ್ಯವರ್ತಿ ಬ್ಯಾಂಕುಗಳ ಪೈಕಿ ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್ ನಂ.1 ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.</p>.<p>ಬ್ಯಾಂಕ್ ಪ್ರಧಾನ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸಾಲ ನೀಡಿಕೆ, ವಸೂಲಾತಿ ಸೇರಿದಂತೆ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಯಲ್ಲಿ ಬ್ಯಾಂಕ್ ಮುಂಚೂಣಿಯಲ್ಲಿದೆ’ ಎಂದರು.</p>.<p>ಮೈಕ್ರೊ ಎ.ಟಿ.ಎಂ. ಸೌಲಭ್ಯ ಉದ್ಘಾಟಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ‘ಕೃಷಿರಂಗದ ಅಭಿವೃದ್ಧಿಗೆ ಬ್ಯಾಂಕ್ ನೀಡಿದ ಕೊಡುಗೆ ಅನನ್ಯ. ಕೃಷಿ ಜತೆಗೆ ಕೃಷಿಕನನ್ನೂ ಬೆಳೆಸಲು ಪೂರಕ ವಾತಾವರಣ ಸೃಷ್ಟಿಯಾಗಲಿ’ ಎಂದರು.</p>.<p>ಭಾರತ್ ಬಿಲ್ ಪೇಮೆಂಟ್ ಸಿಸ್ಟಂ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ‘ಸಹಬಾಳ್ವೆಯ ಆದರ್ಶದೊಂದಿಗೆ ಬ್ಯಾಂಕು ಏಳಿಗೆಯ ಪಥದಲ್ಲಿ ಸಾಗಿರುವುದು ಮಾದರಿ’ ಎಂದರು.</p>.<p>ಶತಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ‘ಸಹಕಾರ ಸಂಸ್ಥೆಗಳು ಜನರ ಬದುಕು ರೂಪಿಸಿದ್ದು ಆರ್ಥಿಕವಾಗಿ ಕೆಡಿಸಿಸಿ ಬ್ಯಾಂಕ್ಆಧಾರಸ್ತಂಭವಾಗಿ ನಿಂತಿದೆ’ ಎಂದರು.</p>.<p>ಆಡಳಿತ ಭವನದ ಹೊಸ ಕಟ್ಟಡ ಉದ್ಘಾಟಿಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಬ್ಯಾಂಕ್ ಜಿಲ್ಲೆಯ ಜನರ ಧ್ವನಿಯಾಗಿ ನಿಂತಿದೆ. ತಳಮಟ್ಟದ ಸಹಕಾರ ಸಂಸ್ಥೆಗಳನ್ನೂ ಬೆಳೆಸಿದೆ’ ಎಂದರು.</p>.<p>ಶಾಸಕ ಆರ್.ವಿ. ದೇಶಪಾಂಡೆ, ‘ಬ್ಯಾಂಕ್ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಿ. ದೇಶದ ಪ್ರತಿಷ್ಠಿತ ಸಂಸ್ಥೆ ಎಂಬ ಗುರುತು ಹೆಮ್ಮೆ ತರುವಂತದ್ದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಮ ಹೆಬ್ಬಾರ, ‘ರೈತರ ಏಳಿಗೆಗೆ ಬ್ಯಾಂಕ್ ನಿರಂತರ ದುಡಿಯುತ್ತಿದೆ. ಸಹಕಾರ ರಂಗದಲ್ಲಿ ಆಲದ ಮರದಂತೆ ಭದ್ರವಾಗಿ ನಿಂತಿದೆ’ ಎಂದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಕೃಷಿ ಸಾಲ ವಿತರಣೆಗೆ ಚಾಲನೆ ನೀಡಿದರು.</p>.<p>ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಎಸ್.ವಿ. ಸಂಕನೂರು, ಎಸ್.ಎಲ್. ಘೋಟ್ನೇಕರ್, ಪ್ರಮುಖರಾದ ವಿ.ಎಸ್. ಪಾಟೀಲ್, ರಾಜೇಂದ್ರಕುಮಾರ್, ಅನಂತ ಹೆಗಡೆ ಅಶೀಸರ, ಪ್ರಮೋದ ಹೆಗಡೆ, ಬ್ಯಾಂಕಿನ ನಿರ್ದೇಶಕರು ಇದ್ದರು. ಉಪಾಧ್ಯಕ್ಷ ಮೋಹನದಾಸ ನಾಯಕ ಸ್ವಾಗತಿಸಿದರು.</p>.<p class="Subhead"><strong>ಸಹಕಾರ ತರಬೇತಿ ಕೇಂದ್ರ ಸ್ಥಾಪನೆ ಭರವಸೆ</strong></p>.<p>ಬದಲಾಗುತ್ತಿರುವ ಸಹಕಾರ ಕಾಯ್ದೆಗಳ ಕುರಿತು ಸಕಾಲಕ್ಕೆ ಮಾಹಿತಿ, ತರಬೇತಿ ನೀಡುವ ನಿಟ್ಟಿನಲ್ಲಿ ಉತ್ತರ ಕನ್ನಡದಲ್ಲಿ ಸಹಕಾರ ತರಬೇತಿ ಕೇಂದ್ರ ಸ್ಥಾಪನೆಗೆ ಪ್ರಯತ್ನಿಸುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದರು.</p>.<p>‘ಕೆಡಿಸಿಸಿ ಬ್ಯಾಂಕ್ ಶತಮಾನೋತ್ಸವದ ನೆನಪಿನಲ್ಲಿ ಸಹಕಾರ ಇಲಾಖೆ ಜಿಲ್ಲೆಯಲ್ಲಿ ತರಬೇತಿ ಕೇಂದ್ರ ಸ್ಥಾಪನೆ ಮಾಡಲಿ’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ರಾಜ್ಯದ 21 ಜಿಲ್ಲಾ ಮಧ್ಯವರ್ತಿ ಬ್ಯಾಂಕುಗಳ ಪೈಕಿ ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್ ನಂ.1 ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.</p>.<p>ಬ್ಯಾಂಕ್ ಪ್ರಧಾನ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸಾಲ ನೀಡಿಕೆ, ವಸೂಲಾತಿ ಸೇರಿದಂತೆ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಯಲ್ಲಿ ಬ್ಯಾಂಕ್ ಮುಂಚೂಣಿಯಲ್ಲಿದೆ’ ಎಂದರು.</p>.<p>ಮೈಕ್ರೊ ಎ.ಟಿ.ಎಂ. ಸೌಲಭ್ಯ ಉದ್ಘಾಟಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ‘ಕೃಷಿರಂಗದ ಅಭಿವೃದ್ಧಿಗೆ ಬ್ಯಾಂಕ್ ನೀಡಿದ ಕೊಡುಗೆ ಅನನ್ಯ. ಕೃಷಿ ಜತೆಗೆ ಕೃಷಿಕನನ್ನೂ ಬೆಳೆಸಲು ಪೂರಕ ವಾತಾವರಣ ಸೃಷ್ಟಿಯಾಗಲಿ’ ಎಂದರು.</p>.<p>ಭಾರತ್ ಬಿಲ್ ಪೇಮೆಂಟ್ ಸಿಸ್ಟಂ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ‘ಸಹಬಾಳ್ವೆಯ ಆದರ್ಶದೊಂದಿಗೆ ಬ್ಯಾಂಕು ಏಳಿಗೆಯ ಪಥದಲ್ಲಿ ಸಾಗಿರುವುದು ಮಾದರಿ’ ಎಂದರು.</p>.<p>ಶತಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ‘ಸಹಕಾರ ಸಂಸ್ಥೆಗಳು ಜನರ ಬದುಕು ರೂಪಿಸಿದ್ದು ಆರ್ಥಿಕವಾಗಿ ಕೆಡಿಸಿಸಿ ಬ್ಯಾಂಕ್ಆಧಾರಸ್ತಂಭವಾಗಿ ನಿಂತಿದೆ’ ಎಂದರು.</p>.<p>ಆಡಳಿತ ಭವನದ ಹೊಸ ಕಟ್ಟಡ ಉದ್ಘಾಟಿಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಬ್ಯಾಂಕ್ ಜಿಲ್ಲೆಯ ಜನರ ಧ್ವನಿಯಾಗಿ ನಿಂತಿದೆ. ತಳಮಟ್ಟದ ಸಹಕಾರ ಸಂಸ್ಥೆಗಳನ್ನೂ ಬೆಳೆಸಿದೆ’ ಎಂದರು.</p>.<p>ಶಾಸಕ ಆರ್.ವಿ. ದೇಶಪಾಂಡೆ, ‘ಬ್ಯಾಂಕ್ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಿ. ದೇಶದ ಪ್ರತಿಷ್ಠಿತ ಸಂಸ್ಥೆ ಎಂಬ ಗುರುತು ಹೆಮ್ಮೆ ತರುವಂತದ್ದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಮ ಹೆಬ್ಬಾರ, ‘ರೈತರ ಏಳಿಗೆಗೆ ಬ್ಯಾಂಕ್ ನಿರಂತರ ದುಡಿಯುತ್ತಿದೆ. ಸಹಕಾರ ರಂಗದಲ್ಲಿ ಆಲದ ಮರದಂತೆ ಭದ್ರವಾಗಿ ನಿಂತಿದೆ’ ಎಂದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಕೃಷಿ ಸಾಲ ವಿತರಣೆಗೆ ಚಾಲನೆ ನೀಡಿದರು.</p>.<p>ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಎಸ್.ವಿ. ಸಂಕನೂರು, ಎಸ್.ಎಲ್. ಘೋಟ್ನೇಕರ್, ಪ್ರಮುಖರಾದ ವಿ.ಎಸ್. ಪಾಟೀಲ್, ರಾಜೇಂದ್ರಕುಮಾರ್, ಅನಂತ ಹೆಗಡೆ ಅಶೀಸರ, ಪ್ರಮೋದ ಹೆಗಡೆ, ಬ್ಯಾಂಕಿನ ನಿರ್ದೇಶಕರು ಇದ್ದರು. ಉಪಾಧ್ಯಕ್ಷ ಮೋಹನದಾಸ ನಾಯಕ ಸ್ವಾಗತಿಸಿದರು.</p>.<p class="Subhead"><strong>ಸಹಕಾರ ತರಬೇತಿ ಕೇಂದ್ರ ಸ್ಥಾಪನೆ ಭರವಸೆ</strong></p>.<p>ಬದಲಾಗುತ್ತಿರುವ ಸಹಕಾರ ಕಾಯ್ದೆಗಳ ಕುರಿತು ಸಕಾಲಕ್ಕೆ ಮಾಹಿತಿ, ತರಬೇತಿ ನೀಡುವ ನಿಟ್ಟಿನಲ್ಲಿ ಉತ್ತರ ಕನ್ನಡದಲ್ಲಿ ಸಹಕಾರ ತರಬೇತಿ ಕೇಂದ್ರ ಸ್ಥಾಪನೆಗೆ ಪ್ರಯತ್ನಿಸುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದರು.</p>.<p>‘ಕೆಡಿಸಿಸಿ ಬ್ಯಾಂಕ್ ಶತಮಾನೋತ್ಸವದ ನೆನಪಿನಲ್ಲಿ ಸಹಕಾರ ಇಲಾಖೆ ಜಿಲ್ಲೆಯಲ್ಲಿ ತರಬೇತಿ ಕೇಂದ್ರ ಸ್ಥಾಪನೆ ಮಾಡಲಿ’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>