ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಪಂಚಾಯ್ತಿ ಜಂಟಿಯಾಗಿ ಗುರುವಾರ ಇಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ, ಅವರು ಮಾತನಾಡಿದರು. ಉತ್ತಮ ಆಡಳಿತದ ಅನುಕರಣೆಯಿಂದ ವಿಶೇಷ ಸಾಧನೆ ಸಾಧ್ಯ ಎಂಬುದನ್ನು ಬೆಂಗಳೂರು ಕಟ್ಟುವ ಮೂಲಕ ಕೆಂಪೇಗೌಡ ತೋರಿಸಿಕೊಟ್ಟಿದ್ದಾರೆ. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡಲು ಕೆಂಪೇಗೌಡರ ಕೊಡುಗೆ ಅನುಪಮವಾಗಿದೆ. ಒಳ್ಳೆಯ ಆಡಳಿತ ವ್ಯವಸ್ಥೆ ಎಲ್ಲಿಯೇ ಇದ್ದರೂ ಅದನ್ನು ಅಳವಡಿಸಿಕೊಳ್ಳಬೇಕು ಎಂಬುದಕ್ಕೆ ಕೆಂಪೇಗೌಡರ ಬೆಂಗಳೂರು ನಿರ್ಮಾಣ ಸಾಕ್ಷಿ. ವಿಜಯನಗರದ ಆಡಳಿತ ವ್ಯವಸ್ಥೆಯಿಂದ ಪ್ರಭಾವಿತರಾಗಿದ್ದ ಅವರು, ಅದನ್ನೇ ಮಾದರಿಯಾಗಿಸಿಕೊಂಡು ಬೆಂಗಳೂರು ಕಟ್ಟುವ ಕಾರ್ಯ ಮಾಡಿದ್ದರು. ಇದರಲ್ಲಿ ಯಶಸ್ವಿಯೂ ಆಗಿದ್ದರು ಎಂದರು.