<p><strong>ಯಲ್ಲಾಪುರ</strong>: ‘ನಾಡಪ್ರಭು ಕೆಂಪೇಗೌಡರು ಅಪಾರ ದೂರದೃಷ್ಟಿಯುಳ್ಳ ನಾಯಕರಾಗಿದ್ದರು’ ಎಂದು ತಹಶೀಲ್ದಾರ್ ಅಶೋಕ ಭಟ್ ಹೇಳಿದರು.</p>.<p>ತಾಲ್ಲೂಕು ಆಡಳಿತ ಪಟ್ಟಣದ ಕಾಳಮ್ಮನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ವಾಸ್ತುಶಿಲ್ಪ, ನೀರಾವರಿ ವ್ಯವಸ್ಥೆ, ಸಂಸ್ಕೃತಿ ರಕ್ಷಣೆ ಮುಂತಾದ ವಿಷಯದಲ್ಲಿ ಅವರ ಕೊಡುಗೆ ಮಹತ್ವದ್ದು’ ಎಂದರು.</p>.<p>ವಿಶ್ವದರ್ಶನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ದತ್ತಾತ್ರೇಯ ಗಾಂವ್ಕರ ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿ, ‘ಕೆಂಪೇಗೌಡರು ನೂರಾರು ಕೆರೆ, ಉದ್ಯಾನ ನಿರ್ಮಿಸಿದರು. ಶುದ್ಧವಾದ ನೀರಿನ ಅಗತ್ಯತೆಯ ಕುರಿತು ಅವರು ಆ ಸಂದರ್ಭದಲ್ಲಿಯೇ ಆಲೋಚಿಸಿದ್ದರು. ನಮ್ಮ ಸುತ್ತಲಿನ ಜಲಮೂಲಗಳನ್ನು ರಕ್ಷಿಸಲು ನಾವು ಅವರಿಂದ ಪ್ರೇರಣೆ ಪಡೆಯಬೇಕಿದೆ’ ಎಂದರು.</p>.<p>ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ವಿದ್ಯಾರ್ಥಿನಿ ಶ್ರೀರಕ್ಷಾ ವೆರ್ಣೆಕರ ಮಾತನಾಡಿದರು. ಗ್ರೇಡ್ 2 ತಹಶೀಲ್ದಾರ್ ಸಿ.ಜಿ ನಾಯ್ಕ, ಭೂಮಾಪನ ಇಲಾಖೆಯ ವನಿತಾ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯಕ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕ ನಾರಾಯಣ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ‘ನಾಡಪ್ರಭು ಕೆಂಪೇಗೌಡರು ಅಪಾರ ದೂರದೃಷ್ಟಿಯುಳ್ಳ ನಾಯಕರಾಗಿದ್ದರು’ ಎಂದು ತಹಶೀಲ್ದಾರ್ ಅಶೋಕ ಭಟ್ ಹೇಳಿದರು.</p>.<p>ತಾಲ್ಲೂಕು ಆಡಳಿತ ಪಟ್ಟಣದ ಕಾಳಮ್ಮನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ವಾಸ್ತುಶಿಲ್ಪ, ನೀರಾವರಿ ವ್ಯವಸ್ಥೆ, ಸಂಸ್ಕೃತಿ ರಕ್ಷಣೆ ಮುಂತಾದ ವಿಷಯದಲ್ಲಿ ಅವರ ಕೊಡುಗೆ ಮಹತ್ವದ್ದು’ ಎಂದರು.</p>.<p>ವಿಶ್ವದರ್ಶನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ದತ್ತಾತ್ರೇಯ ಗಾಂವ್ಕರ ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿ, ‘ಕೆಂಪೇಗೌಡರು ನೂರಾರು ಕೆರೆ, ಉದ್ಯಾನ ನಿರ್ಮಿಸಿದರು. ಶುದ್ಧವಾದ ನೀರಿನ ಅಗತ್ಯತೆಯ ಕುರಿತು ಅವರು ಆ ಸಂದರ್ಭದಲ್ಲಿಯೇ ಆಲೋಚಿಸಿದ್ದರು. ನಮ್ಮ ಸುತ್ತಲಿನ ಜಲಮೂಲಗಳನ್ನು ರಕ್ಷಿಸಲು ನಾವು ಅವರಿಂದ ಪ್ರೇರಣೆ ಪಡೆಯಬೇಕಿದೆ’ ಎಂದರು.</p>.<p>ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ವಿದ್ಯಾರ್ಥಿನಿ ಶ್ರೀರಕ್ಷಾ ವೆರ್ಣೆಕರ ಮಾತನಾಡಿದರು. ಗ್ರೇಡ್ 2 ತಹಶೀಲ್ದಾರ್ ಸಿ.ಜಿ ನಾಯ್ಕ, ಭೂಮಾಪನ ಇಲಾಖೆಯ ವನಿತಾ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯಕ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕ ನಾರಾಯಣ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>