<p><strong>ಕಾರವಾರ:</strong> ‘ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆಯದೆ ಅಂಕೋಲಾ ತಾಲ್ಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರು ಯೋಜನೆ ಕೈಬಿಡಬೇಕು’ ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>‘ಸಾವಿರಾರು ಕೋಟಿ ವೆಚ್ಚದ ಈ ಯೋಜನೆ ಜಾರಿಯಿಂದ ಮೀನುಗಾರರು, ರೈತರಿಗೆ ಸೇರಿದ ನೂರಾರು ಎಕರೆ ಭೂಮಿ ಸ್ವಾಧೀನಗೊಳ್ಳಲಿದೆ. ಕೃಷಿ, ಮೀನುಗಾರಿಕೆ ಅವಲಂಭಿಸಿಕೊಂಡಿರುವ ಕುಟುಂಬಗಳು ಬೀದಿಪಾಲಾಗಲಿವೆ. ನೂರಾರು ಜನರನ್ನು ಬೀದಿಗೆ ತಳ್ಳುವ ಯೋಜನೆ ಜಾರಿಗೊಳಿಸುವ ಅಗತ್ಯವಿಲ್ಲ’ ಎಂದು ಒತ್ತಾಯಿಸಿದರು.</p>.<p>‘ಬಂದರು ನಿರ್ಮಾಣಗೊಳ್ಳಲಿರುವ ಸ್ಥಳಕ್ಕೆ ಸಮೀಪದಲ್ಲೇ ನೌಕಾನೆಲೆ ಇದೆ. ಗ್ರೀನ್ಫೀಲ್ಡ್ ಬಂದರಿಗೆ ವಿದೇಶಿ ಹಡಗುಗಳ ಸಂಚಾರ ನಿರಂತರವಾಗಿರುವುದರಿಂದ ಭದ್ರತೆ ದೃಷ್ಟಿಯಿಂದ ಈ ಯೋಜನೆ ಕಾರ್ಯಸಾಧು ಅಲ್ಲ ಎಂದೆನಿಸುತ್ತದೆ. ಯೋಜನೆ ಜಾರಿಗೆ ಮುನ್ನ ರಕ್ಷಣಾ ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ. ಅಲ್ಲದೇ, ಬಂದರು ಯೋಜನೆಗೆ ಸಂಬಂಧಿಸಿದಂತೆ ಪರಿಸರ ಪರಿಣಾಮ ಮೌಲ್ಯೀಕರಣ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಿಲ್ಲ’ ಎಂದು ದೂರಿದರು.</p>.<p>‘ಬಂದರು ಯೋಜನೆ ಜಾರಿಗೆ ತರುವಂತೆ ಜನರ ದಿಕ್ಕು ತಪ್ಪಿಸಲು ಬಾಹ್ಯಶಕ್ತಿಗಳು ಪ್ರಯತ್ನ ನಡೆಸುತ್ತಿವೆ. ಯೋಜನೆ ವ್ಯಾಪ್ತಿಯ ಪ್ರದೇಶದವರಲ್ಲದ, ಹೊರಗಿನಿಂದ ಬಂದ ಕೆಲವರು ಬಂದರು ನಿರ್ಮಿಸಲಿರುವ ಖಾಸಗಿ ಕಂಪನಿ ಮತ್ತು ಜನರನ್ನು ವಂಚಿಸಲು ಯತ್ನಿಸುತ್ತಿದ್ದಾರೆ’ ಎಂದೂ ದೂರಿದರು.</p>.<p>ಪ್ರಮುಖರಾದ ರಾಜೇಂದ್ರ ನಾಯ್ಕ, ಹುವಾ ಕಂಡೇಕರ, ಜಗದೀಶ ನಾಯಕ ಮೊಗಟಾ, ಸಂಜು ನಾಯ್ಕ, ಪರ್ಬತ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆಯದೆ ಅಂಕೋಲಾ ತಾಲ್ಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರು ಯೋಜನೆ ಕೈಬಿಡಬೇಕು’ ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>‘ಸಾವಿರಾರು ಕೋಟಿ ವೆಚ್ಚದ ಈ ಯೋಜನೆ ಜಾರಿಯಿಂದ ಮೀನುಗಾರರು, ರೈತರಿಗೆ ಸೇರಿದ ನೂರಾರು ಎಕರೆ ಭೂಮಿ ಸ್ವಾಧೀನಗೊಳ್ಳಲಿದೆ. ಕೃಷಿ, ಮೀನುಗಾರಿಕೆ ಅವಲಂಭಿಸಿಕೊಂಡಿರುವ ಕುಟುಂಬಗಳು ಬೀದಿಪಾಲಾಗಲಿವೆ. ನೂರಾರು ಜನರನ್ನು ಬೀದಿಗೆ ತಳ್ಳುವ ಯೋಜನೆ ಜಾರಿಗೊಳಿಸುವ ಅಗತ್ಯವಿಲ್ಲ’ ಎಂದು ಒತ್ತಾಯಿಸಿದರು.</p>.<p>‘ಬಂದರು ನಿರ್ಮಾಣಗೊಳ್ಳಲಿರುವ ಸ್ಥಳಕ್ಕೆ ಸಮೀಪದಲ್ಲೇ ನೌಕಾನೆಲೆ ಇದೆ. ಗ್ರೀನ್ಫೀಲ್ಡ್ ಬಂದರಿಗೆ ವಿದೇಶಿ ಹಡಗುಗಳ ಸಂಚಾರ ನಿರಂತರವಾಗಿರುವುದರಿಂದ ಭದ್ರತೆ ದೃಷ್ಟಿಯಿಂದ ಈ ಯೋಜನೆ ಕಾರ್ಯಸಾಧು ಅಲ್ಲ ಎಂದೆನಿಸುತ್ತದೆ. ಯೋಜನೆ ಜಾರಿಗೆ ಮುನ್ನ ರಕ್ಷಣಾ ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ. ಅಲ್ಲದೇ, ಬಂದರು ಯೋಜನೆಗೆ ಸಂಬಂಧಿಸಿದಂತೆ ಪರಿಸರ ಪರಿಣಾಮ ಮೌಲ್ಯೀಕರಣ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಿಲ್ಲ’ ಎಂದು ದೂರಿದರು.</p>.<p>‘ಬಂದರು ಯೋಜನೆ ಜಾರಿಗೆ ತರುವಂತೆ ಜನರ ದಿಕ್ಕು ತಪ್ಪಿಸಲು ಬಾಹ್ಯಶಕ್ತಿಗಳು ಪ್ರಯತ್ನ ನಡೆಸುತ್ತಿವೆ. ಯೋಜನೆ ವ್ಯಾಪ್ತಿಯ ಪ್ರದೇಶದವರಲ್ಲದ, ಹೊರಗಿನಿಂದ ಬಂದ ಕೆಲವರು ಬಂದರು ನಿರ್ಮಿಸಲಿರುವ ಖಾಸಗಿ ಕಂಪನಿ ಮತ್ತು ಜನರನ್ನು ವಂಚಿಸಲು ಯತ್ನಿಸುತ್ತಿದ್ದಾರೆ’ ಎಂದೂ ದೂರಿದರು.</p>.<p>ಪ್ರಮುಖರಾದ ರಾಜೇಂದ್ರ ನಾಯ್ಕ, ಹುವಾ ಕಂಡೇಕರ, ಜಗದೀಶ ನಾಯಕ ಮೊಗಟಾ, ಸಂಜು ನಾಯ್ಕ, ಪರ್ಬತ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>