‘ಸಿದ್ದಾಪುರ, ಹೊನ್ನಾವರದಲ್ಲಿ ಮಂಗ ಸತ್ತ ಪ್ರಕರಣ ವರದಿಯಾಗಿದ್ದವು. ತಕ್ಷಣ ಜನರು ಆರೋಗ್ಯ ಇಲಾಖೆ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮಂಗ ಸತ್ತ ಸ್ಥಳದ ಸುತ್ತಲಿನ ಪ್ರದೇಶದಲ್ಲಿ ಉಣ್ಣೆಗಳು ಹರಡದಂತೆ ಕ್ರಮ ಕೈಗೊಳ್ಳಲಾಯಿತು. ಜನರಿಗೂ ಅರಣ್ಯ ಪ್ರದೇಶಕ್ಕೆ ತೆರಳದಂತೆ ಸೂಚನೆ ನೀಡಿದ್ದು ಫಲ ನೀಡಿತು’ ಎಂದರು.