<p><strong>ಕಾರವಾರ</strong>: ‘ಕೊಡಸಳ್ಳಿ ಅಣೆಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಬಿದ್ದ ಮಣ್ಣಿನ ರಾಶಿಯನ್ನು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯ (ಜಿಎಸ್ಐ) ತಜ್ಞರ ಸಲಹೆ ಪಡೆದು ಕರ್ನಾಟಕ ವಿದ್ಯುತ್ ನಿಗಮದಿಂದಲೇ (ಕೆಪಿಸಿ) ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ‘ವಿದ್ಯುದಾಗಾರಕ್ಕೆ ಇಂಧನ ಸಾಗಿಸಲು ತೊಂದರೆಯಾಗುತ್ತಿದ್ದು, ಮಣ್ಣು ತೆರವು ಮಾಡಿಕೊಡಬೇಕು’ ಎಂಬ ಕೆಪಿಸಿ ಅಧಿಕಾರಿಗಳ ಪ್ರಸ್ತಾವಕ್ಕೆ ಪ್ರತಿಕ್ರಿಯಿಸಿದರು.</p>.<p>‘ಭೂಕುಸಿತದಿಂದ ಬಾಧಿತವಾಗಿರುವ ಯಲ್ಲಾಪುರ ತಾಲ್ಲೂಕಿನ ಕಳಚೆ ಗ್ರಾಮದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಜಾಗ ಗುರುತಿಸಿ, ವರದಿ ಸಲ್ಲಿಸಿ’ ಎಂದು ಶಿರಸಿ ಉಪವಿಭಾಗಾಧಿಕಾರಿಗೆ ಸೂಚಿಸಿದರು.</p>.<p>‘2021ರಲ್ಲಿ ಕುಸಿತ ದುರಂತ ಸಂಭವಿಸಿದೆ. ಇನ್ನೂ ಪುನರ್ವಸತಿಗೆ ಪರ್ಯಾಯ ಜಾಗ ಗುರುತು ಮಾಡಲಾಗಿಲ್ಲ. ಆದಷ್ಟು ಶೀಘ್ರದಲ್ಲಿ ಪರ್ಯಾಯ ಜಾಗ ಗುರುತಿಸಿ, ಅಲ್ಲಿನ ಸಂತ್ರಸ್ತ ಕುಟುಂಬಗಳನ್ನು ಸ್ಥಳಾಂತರಿಸುವ ಅಗತ್ಯವಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಡಿಸಿಎಫ್ಗಳಾದ ಸಿ. ರವಿಶಂಕರ್, ಯೋಗೇಶ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಇದ್ದರು. </p>.<div><blockquote>ಕಳಚೆ ಪ್ರದೇಶದಲ್ಲಿ ಭೂ ಕುಸಿತ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಕುರಿರು ಅಧಿಕಾರಿಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು</blockquote><span class="attribution">ಕೆ.ಲಕ್ಷ್ಮಿಪ್ರಿಯಾ ಜಿಲ್ಲಾಧಿಕಾರಿ </span></div>.<p> <strong>‘ಚರಂಡಿಯಲ್ಲಿನ ಹೂಳೆತ್ತಿ’ </strong></p><p>‘ಕಾರವಾರ ನಗರ ವ್ಯಾಪ್ತಿಯಲ್ಲಿನ ಚರಂಡಿಗಳಲ್ಲಿ ಸರಿಯಾಗಿ ಹೂಳೆತ್ತದ ಪರಿಣಾಮ ಕೆಲದಿನಗಳ ಹಿಂದೆ ಸುರಿದ ಮಳೆಗೆ ಜಲಾವೃತ ಉಂಟಾಯಿತು. ನಗರಸಭೆಯಿಂದ ಚರಂಡಿಗಳಲ್ಲಿ ಹೂಳೆತ್ತುವ ಕೆಲಸವಾಗಬೇಕು. ನೀರು ಹರಿದುಹೋಗುವ ಮಾರ್ಗದಲ್ಲಿ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನೂ ತೆರವುಗೊಳಿಸಿ’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಕೊಡಸಳ್ಳಿ ಅಣೆಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಬಿದ್ದ ಮಣ್ಣಿನ ರಾಶಿಯನ್ನು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯ (ಜಿಎಸ್ಐ) ತಜ್ಞರ ಸಲಹೆ ಪಡೆದು ಕರ್ನಾಟಕ ವಿದ್ಯುತ್ ನಿಗಮದಿಂದಲೇ (ಕೆಪಿಸಿ) ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ‘ವಿದ್ಯುದಾಗಾರಕ್ಕೆ ಇಂಧನ ಸಾಗಿಸಲು ತೊಂದರೆಯಾಗುತ್ತಿದ್ದು, ಮಣ್ಣು ತೆರವು ಮಾಡಿಕೊಡಬೇಕು’ ಎಂಬ ಕೆಪಿಸಿ ಅಧಿಕಾರಿಗಳ ಪ್ರಸ್ತಾವಕ್ಕೆ ಪ್ರತಿಕ್ರಿಯಿಸಿದರು.</p>.<p>‘ಭೂಕುಸಿತದಿಂದ ಬಾಧಿತವಾಗಿರುವ ಯಲ್ಲಾಪುರ ತಾಲ್ಲೂಕಿನ ಕಳಚೆ ಗ್ರಾಮದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಜಾಗ ಗುರುತಿಸಿ, ವರದಿ ಸಲ್ಲಿಸಿ’ ಎಂದು ಶಿರಸಿ ಉಪವಿಭಾಗಾಧಿಕಾರಿಗೆ ಸೂಚಿಸಿದರು.</p>.<p>‘2021ರಲ್ಲಿ ಕುಸಿತ ದುರಂತ ಸಂಭವಿಸಿದೆ. ಇನ್ನೂ ಪುನರ್ವಸತಿಗೆ ಪರ್ಯಾಯ ಜಾಗ ಗುರುತು ಮಾಡಲಾಗಿಲ್ಲ. ಆದಷ್ಟು ಶೀಘ್ರದಲ್ಲಿ ಪರ್ಯಾಯ ಜಾಗ ಗುರುತಿಸಿ, ಅಲ್ಲಿನ ಸಂತ್ರಸ್ತ ಕುಟುಂಬಗಳನ್ನು ಸ್ಥಳಾಂತರಿಸುವ ಅಗತ್ಯವಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಡಿಸಿಎಫ್ಗಳಾದ ಸಿ. ರವಿಶಂಕರ್, ಯೋಗೇಶ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಇದ್ದರು. </p>.<div><blockquote>ಕಳಚೆ ಪ್ರದೇಶದಲ್ಲಿ ಭೂ ಕುಸಿತ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಕುರಿರು ಅಧಿಕಾರಿಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು</blockquote><span class="attribution">ಕೆ.ಲಕ್ಷ್ಮಿಪ್ರಿಯಾ ಜಿಲ್ಲಾಧಿಕಾರಿ </span></div>.<p> <strong>‘ಚರಂಡಿಯಲ್ಲಿನ ಹೂಳೆತ್ತಿ’ </strong></p><p>‘ಕಾರವಾರ ನಗರ ವ್ಯಾಪ್ತಿಯಲ್ಲಿನ ಚರಂಡಿಗಳಲ್ಲಿ ಸರಿಯಾಗಿ ಹೂಳೆತ್ತದ ಪರಿಣಾಮ ಕೆಲದಿನಗಳ ಹಿಂದೆ ಸುರಿದ ಮಳೆಗೆ ಜಲಾವೃತ ಉಂಟಾಯಿತು. ನಗರಸಭೆಯಿಂದ ಚರಂಡಿಗಳಲ್ಲಿ ಹೂಳೆತ್ತುವ ಕೆಲಸವಾಗಬೇಕು. ನೀರು ಹರಿದುಹೋಗುವ ಮಾರ್ಗದಲ್ಲಿ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನೂ ತೆರವುಗೊಳಿಸಿ’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>