<p><strong>ಗೋಕರ್ಣ:</strong> ಧಾರ್ಮಿಕ ಕ್ಷೇತ್ರ ಗೋಕರ್ಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು. ಭಕ್ತರು ಮಂಗಳವಾರ ಮತ್ತು ಬುಧವಾರ ಕೋಟಿತೀರ್ಥ ಕಟ್ಟೆಯಲ್ಲಿರುವ ಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗಿ ನಿರ್ದಿಷ್ಟಪಡಿಸಿದ್ದ ಸಮಯದಲ್ಲಿ ಪೂಜೆ ಸಲ್ಲಿಸಿದರು.</p>.<p>ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಬಾಲಕೃಷ್ಣನ ಬೆಳ್ಳಿಯ ಮೂರ್ತಿಯನ್ನು ಬೆಳ್ಳಿಯ ತೊಟ್ಟಿಲಲ್ಲಿ ಮಲಗಿಸಿ ಕೃಷ್ಣನ ಜನ್ಮಾಚರಣೆಯನ್ನು ಆಚರಿಸಲಾಯಿತು.</p>.<p>ಪುರಾತನ ಕಾಲದಿಂದ ೀ ಸಂದರ್ಭದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಭಜನಾ ಸಪ್ತಾಹವನ್ನು ಕೋವಿಡ್-19 ಕಾರಣಕ್ಕೆ ಈ ವರ್ಷ ಆಚರಿಸದೇ ಕೈಬಿಡಲಾಯಿತು. ಎಲ್ಲ ಸಮುದಾಯದವರು ಈ ಭಜನಾ ಸಪ್ತಾಹದಲ್ಲಿ ಭಾಗವಹಿಸುವುದು ಇಲ್ಲಿನ ವಿಶೇಷ.</p>.<p>ಮಕ್ಕಳಿಗೆ ನಿರಾಸೆ ತಂದ ಹಬ್ಬ: ಈ ವರ್ಷದ ಕೃಷ್ಣಾಷ್ಟಮಿ ಹಬ್ಬ ಮಕ್ಕಳಿಗೆ ನಿರಾಸೆ ಉಂಟುಮಾಡಿತು. ಈ ಹಬ್ಬದ ದಿವಸ ಪೆಟ್ಲೆ ಹೊಡೆಯುವುದು ಬಹುವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದರೆ ಈ ವರ್ಷ ಪೆಟ್ಲೆ ಅಂಡೆಗೆ ಉಪಯೋಗಿಸುವ ಜುಮ್ಮನ ಕಾಳು ಇನ್ನೂ ಆಗದಿರುವುದೇ ಮಕ್ಕಳು ಉತ್ಸಾಹದಿಂದ ಈ ಹಬ್ಬ ಆಚರಿಸಲು ಸಾಧ್ಯವಾಗಿಲ್ಲ. ಈ ಹಬ್ಬದಲ್ಲಿ ಪೆಟ್ಲೆ ಹೊಡೆದವನಿಗೆ ಖುಷಿಯಾದರೆ, ಹೊಡೆತ ತಿಂದವನಿಗೆ ಉರಿಯಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕರ್ಣ:</strong> ಧಾರ್ಮಿಕ ಕ್ಷೇತ್ರ ಗೋಕರ್ಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು. ಭಕ್ತರು ಮಂಗಳವಾರ ಮತ್ತು ಬುಧವಾರ ಕೋಟಿತೀರ್ಥ ಕಟ್ಟೆಯಲ್ಲಿರುವ ಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗಿ ನಿರ್ದಿಷ್ಟಪಡಿಸಿದ್ದ ಸಮಯದಲ್ಲಿ ಪೂಜೆ ಸಲ್ಲಿಸಿದರು.</p>.<p>ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಬಾಲಕೃಷ್ಣನ ಬೆಳ್ಳಿಯ ಮೂರ್ತಿಯನ್ನು ಬೆಳ್ಳಿಯ ತೊಟ್ಟಿಲಲ್ಲಿ ಮಲಗಿಸಿ ಕೃಷ್ಣನ ಜನ್ಮಾಚರಣೆಯನ್ನು ಆಚರಿಸಲಾಯಿತು.</p>.<p>ಪುರಾತನ ಕಾಲದಿಂದ ೀ ಸಂದರ್ಭದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಭಜನಾ ಸಪ್ತಾಹವನ್ನು ಕೋವಿಡ್-19 ಕಾರಣಕ್ಕೆ ಈ ವರ್ಷ ಆಚರಿಸದೇ ಕೈಬಿಡಲಾಯಿತು. ಎಲ್ಲ ಸಮುದಾಯದವರು ಈ ಭಜನಾ ಸಪ್ತಾಹದಲ್ಲಿ ಭಾಗವಹಿಸುವುದು ಇಲ್ಲಿನ ವಿಶೇಷ.</p>.<p>ಮಕ್ಕಳಿಗೆ ನಿರಾಸೆ ತಂದ ಹಬ್ಬ: ಈ ವರ್ಷದ ಕೃಷ್ಣಾಷ್ಟಮಿ ಹಬ್ಬ ಮಕ್ಕಳಿಗೆ ನಿರಾಸೆ ಉಂಟುಮಾಡಿತು. ಈ ಹಬ್ಬದ ದಿವಸ ಪೆಟ್ಲೆ ಹೊಡೆಯುವುದು ಬಹುವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದರೆ ಈ ವರ್ಷ ಪೆಟ್ಲೆ ಅಂಡೆಗೆ ಉಪಯೋಗಿಸುವ ಜುಮ್ಮನ ಕಾಳು ಇನ್ನೂ ಆಗದಿರುವುದೇ ಮಕ್ಕಳು ಉತ್ಸಾಹದಿಂದ ಈ ಹಬ್ಬ ಆಚರಿಸಲು ಸಾಧ್ಯವಾಗಿಲ್ಲ. ಈ ಹಬ್ಬದಲ್ಲಿ ಪೆಟ್ಲೆ ಹೊಡೆದವನಿಗೆ ಖುಷಿಯಾದರೆ, ಹೊಡೆತ ತಿಂದವನಿಗೆ ಉರಿಯಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>