<p>ಕುಮಟಾ: ತಾಲ್ಲೂಕಿನ ಕೋಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಶಿಹಿತ್ತಲಗುತ್ತಲ ಗ್ರಾಮಸ್ಥರು ಕುಡಿಯುವ ನೀರು ಸೇರಿದಂತೆ ಮುಂತಾದ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಶಿಹಿತ್ತಲ ಗ್ರಾಮಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಎರಡು ದಿನಕೊಮ್ಮೆ ನೀರು ಪೂರೈಸುತ್ತಿದ್ದಾರೆ. ಕಾರಣ 2 ಕಿ.ಮೀ ದೂರ ಕ್ರಮಿಸಿ ಕುಡಿಯುವ ನೀರು ತರುವ ದುಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಟ್ಯಾಂಕ್ ಕೂಡ ಹಲವು ವರ್ಷಗಳಿಂದ ಸ್ವಚ್ಛಗೊಳಿಸಲಿಲ್ಲ. ಎಂದು ಗ್ರಾಮಸ್ಥರು ಅವಲತ್ತುಕೊಂಡರು.</p>.<p>ಜನರ ಸಮಸ್ಯೆ ಆಲಿಸಿದ ತಹಶೀಲ್ದಾರ್ ಕೃಷ್ಣ ಕಾಮಕರ್, ‘ಬೇಸಿಗೆಯಲ್ಲಿ ನಲ್ಲಿ ನೀರು ಸಾಲದಿದ್ದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಆರ್.ಎಲ್. ಭಟ್ಟ, ಸಿಪಿಐ ಕೆ.ಯೋಗೆಶ್, ಗ್ರಾಮ ಪಂಚಾಯಿತಿ ಆಳಿತಾಧಿಕಾರಿ ವಿನಾಯಕ ವೈದ್ಯ ಇದ್ದರು.</p>.<p>ಪ್ರತಿಭಟನೆಯಲ್ಲಿ ನಾರಾಯಣ ನಾಯ್ಕ, ಅಣ್ಣಪ್ಪ ನಾಯ್ಕ, ವೆಂಕಟೇಶ ನಾಯ್ಕ, ಗಿರಿಶ ಅಂಬಿಗ, ತಮ್ಮಣ್ಣ ಅಂಬಿಗ, ಬಾಬು ನಾಯ್ಕ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-20-1007474690</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಮಟಾ: ತಾಲ್ಲೂಕಿನ ಕೋಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಶಿಹಿತ್ತಲಗುತ್ತಲ ಗ್ರಾಮಸ್ಥರು ಕುಡಿಯುವ ನೀರು ಸೇರಿದಂತೆ ಮುಂತಾದ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಶಿಹಿತ್ತಲ ಗ್ರಾಮಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಎರಡು ದಿನಕೊಮ್ಮೆ ನೀರು ಪೂರೈಸುತ್ತಿದ್ದಾರೆ. ಕಾರಣ 2 ಕಿ.ಮೀ ದೂರ ಕ್ರಮಿಸಿ ಕುಡಿಯುವ ನೀರು ತರುವ ದುಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಟ್ಯಾಂಕ್ ಕೂಡ ಹಲವು ವರ್ಷಗಳಿಂದ ಸ್ವಚ್ಛಗೊಳಿಸಲಿಲ್ಲ. ಎಂದು ಗ್ರಾಮಸ್ಥರು ಅವಲತ್ತುಕೊಂಡರು.</p>.<p>ಜನರ ಸಮಸ್ಯೆ ಆಲಿಸಿದ ತಹಶೀಲ್ದಾರ್ ಕೃಷ್ಣ ಕಾಮಕರ್, ‘ಬೇಸಿಗೆಯಲ್ಲಿ ನಲ್ಲಿ ನೀರು ಸಾಲದಿದ್ದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಆರ್.ಎಲ್. ಭಟ್ಟ, ಸಿಪಿಐ ಕೆ.ಯೋಗೆಶ್, ಗ್ರಾಮ ಪಂಚಾಯಿತಿ ಆಳಿತಾಧಿಕಾರಿ ವಿನಾಯಕ ವೈದ್ಯ ಇದ್ದರು.</p>.<p>ಪ್ರತಿಭಟನೆಯಲ್ಲಿ ನಾರಾಯಣ ನಾಯ್ಕ, ಅಣ್ಣಪ್ಪ ನಾಯ್ಕ, ವೆಂಕಟೇಶ ನಾಯ್ಕ, ಗಿರಿಶ ಅಂಬಿಗ, ತಮ್ಮಣ್ಣ ಅಂಬಿಗ, ಬಾಬು ನಾಯ್ಕ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-20-1007474690</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>