<p><strong>ಕುಮಟಾ:</strong> `ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸೌಲಭ್ಯ ಸುತ್ತಲಿನ ಬಡ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡುವುದು ಕಾಲೇಜಿನ ಅಬಿವೃದ್ಧಿ ಸಮಿತಿ ಹಾಗೂ ಶಿಕ್ಷಕರ ಪ್ರಮುಖ ಹೊಣೆಗಾರಿಕೆಯಾಗಿದೆ’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ತಾಲ್ಲೂಕಿನ ಹಿರೇಗುತ್ತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಶನಿವಾರ ಮಾತನಾಡಿದ, ಅವರು, `ಸಮುದಾಯದ ಸಹಕಾರ, ಶಿಕ್ಷಕರ ತ್ಯಾಗ ಹಾಗೂ ಅಭಿವೃದ್ಧಿ ಸಮಿತಿಯ ನೆರವಿಲ್ಲದೆ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಪ್ರಯೋಜನ ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ತಲುಪಿಸುವುದು ಸಾಧ್ಯ. ಈ ದಿಸೆಯಲ್ಲಿ ಎಲ್ಲರೂ ಸೇರಿ ಶೈಕ್ಷಣಿಕ ದಾಸೋಹದ ಯಶಸ್ಸಿಗೆ ಶ್ರಮಿಸಬೇಕು’ ಎಂದರು.</p>.<p>ಅತಿಥಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ ನಾಯ್ಕ ಮಾತನಾಡಿ, `ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗ್ರಾಮೀಣ ಭಾಗದ ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕರು, ಪ್ರಾಚಾರ್ಯರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಿದ ಉದಾಹರಣೆಗಳಿವೆ. ಅದುವೇ ನಿಜವಾದ ಶಿಕ್ಷಣ ಪ್ರೀತಿ’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇ.ಒ. ಆರ್.ಎಲ್. ಭಟ್ಟ, `ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶ ಸಾಧಿಸುವ ಅವಕಾಶಗಳನ್ನು ವಿದ್ಯಾರ್ಥಿಗಳು ಕಳೆದುಕೊಳ್ಳದೆ ಶಿಕ್ಷಕರ ನೆರವು ಪಡೆಯಬೇಕು’ ಎಂದರು.</p>.<p>ಅಭಿವೃದ್ಧಿ ಸಮಿತಿ ಸದಸ್ಯರಾದ ರಾಮು ಕೆಂಚನ್, ಉದ್ದಂಡ ನಾಯಕ, ಜಗದೀಶ ನಾಯಕ ಮತ್ತು ಮಾಣೇಶ್ವರ ನಾಯಕ, ಪ್ರಾಚಾರ್ಯ ರಾಜೀವ ನಾಯ್ಕ, ಉಪನ್ಯಾಸಕರಾದ ನಾಗರಾಜ ಗಾಂವ್ಕರ, ವಿಜಯಲಕ್ಷ್ಮಿ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ:</strong> `ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸೌಲಭ್ಯ ಸುತ್ತಲಿನ ಬಡ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡುವುದು ಕಾಲೇಜಿನ ಅಬಿವೃದ್ಧಿ ಸಮಿತಿ ಹಾಗೂ ಶಿಕ್ಷಕರ ಪ್ರಮುಖ ಹೊಣೆಗಾರಿಕೆಯಾಗಿದೆ’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ತಾಲ್ಲೂಕಿನ ಹಿರೇಗುತ್ತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಶನಿವಾರ ಮಾತನಾಡಿದ, ಅವರು, `ಸಮುದಾಯದ ಸಹಕಾರ, ಶಿಕ್ಷಕರ ತ್ಯಾಗ ಹಾಗೂ ಅಭಿವೃದ್ಧಿ ಸಮಿತಿಯ ನೆರವಿಲ್ಲದೆ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಪ್ರಯೋಜನ ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ತಲುಪಿಸುವುದು ಸಾಧ್ಯ. ಈ ದಿಸೆಯಲ್ಲಿ ಎಲ್ಲರೂ ಸೇರಿ ಶೈಕ್ಷಣಿಕ ದಾಸೋಹದ ಯಶಸ್ಸಿಗೆ ಶ್ರಮಿಸಬೇಕು’ ಎಂದರು.</p>.<p>ಅತಿಥಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ ನಾಯ್ಕ ಮಾತನಾಡಿ, `ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗ್ರಾಮೀಣ ಭಾಗದ ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕರು, ಪ್ರಾಚಾರ್ಯರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಿದ ಉದಾಹರಣೆಗಳಿವೆ. ಅದುವೇ ನಿಜವಾದ ಶಿಕ್ಷಣ ಪ್ರೀತಿ’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇ.ಒ. ಆರ್.ಎಲ್. ಭಟ್ಟ, `ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶ ಸಾಧಿಸುವ ಅವಕಾಶಗಳನ್ನು ವಿದ್ಯಾರ್ಥಿಗಳು ಕಳೆದುಕೊಳ್ಳದೆ ಶಿಕ್ಷಕರ ನೆರವು ಪಡೆಯಬೇಕು’ ಎಂದರು.</p>.<p>ಅಭಿವೃದ್ಧಿ ಸಮಿತಿ ಸದಸ್ಯರಾದ ರಾಮು ಕೆಂಚನ್, ಉದ್ದಂಡ ನಾಯಕ, ಜಗದೀಶ ನಾಯಕ ಮತ್ತು ಮಾಣೇಶ್ವರ ನಾಯಕ, ಪ್ರಾಚಾರ್ಯ ರಾಜೀವ ನಾಯ್ಕ, ಉಪನ್ಯಾಸಕರಾದ ನಾಗರಾಜ ಗಾಂವ್ಕರ, ವಿಜಯಲಕ್ಷ್ಮಿ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>