ಜಿಲ್ಲೆಯ ಯಾವುದೇ ಭಾಗದಲ್ಲಿ ಮೂಲಸೌಕರ್ಯಗಳ ಕೊರತೆ ಸೇರಿದಂತೆ ಏನೇ ಸಮಸ್ಯೆ ಇದ್ದರೂ ಜನರು ಗಮನಕ್ಕೆ ತರಬೇಕು. ಅವುಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಲಾಗುವುದು. ಚುನಾವಣೆ ಬಹಿಷ್ಕರಿಸುವ ಕೆಲಸ ಮಾಡದಂತೆ ವಿನಂತಿಸುತ್ತೇನೆ.ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ
ವಾಣಿಜ್ಯ ಬಂದರು ನಿರ್ಮಾಣ ವಿರೋಧಿ ಹೋರಾಟಕ್ಕೆ ಆಡಳಿತ ವರ್ಗದಿಂದ ಸರಿಯಾದ ಸ್ಪಂದನೆ ಸಿಗದಿರುವುದರಿಂದ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡುವುದು ಅನಿವಾರ್ಯವಾಯಿತು.ರಾಜೇಶ ತಾಂಡೇಲ ಟೊಂಕ ವಾಣಿಜ್ಯ ಬಂದರು ವಿರೋಧಿ ಜಂಟಿ ಹೋರಾಟ ಸಮಿತಿ ಅಧ್ಯಕ್ಷ
ರಸ್ತೆ ನಿರ್ಮಾಣದ ಬೇಡಿಕೆ ಈಡೇರುವವರೆಗೂ ಅರ್ಜಿ ಚಳವಳಿಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಕೇವಲ ಈ ಬಾರಿಯ ಚುನಾವಣೆಯಷ್ಟೇ ಅಲ್ಲದೆ ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಚುನಾವಣೆಯಲ್ಲೂ ಮತದಾನ ಮಾಡದಿರಲು ಸ್ವಇಚ್ಛೆಯಿಂದ ನಿರ್ಣಯಿಸಲಾಗಿದೆ.ಶ್ರೀಪತಿ ಹೆಗಡೆ ಕೋಡನಮನೆ ರೈತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.