<p><strong>ಕಾರವಾರ</strong>: ಕುಮಟಾ ತಾಲ್ಲೂಕಿನ ಬರ್ಗಿ ಸಮೀಪ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಕುಸಿದ ಗುಡ್ಡದ ಮಣ್ಣನ್ನು ತೆರವುಗೊಳಿಸುವ ವೇಳೆ ಪುನಃ ಗುಡ್ಡ ಕುಸಿದಿದೆ.</p><p>ಗುರುವಾರ ಬೆಳಿಗ್ಗೆ ಗುಡ್ಡ ಕುಸಿದಿದ್ದರಿಂದ ಕುಮಟಾ-ಗೋಕರ್ಣ ಮಾರ್ಗದ ಒಂದು ಭಾಗದಲ್ಲಿ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಇನ್ನೊಂದು ಮಾರ್ಗದ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯ ನಡೆದಿತ್ತು.</p><p>ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸುವಾಗಲೆ ಗುಡ್ಡದಿಂದ ವ್ಯಾಪಕ ಪ್ರಮಾಣದ ಮಣ್ಣು ಕುಸಿದು, ಎರಡೂ ಪಥವನ್ನೂ ಆವರಿಸಿಕೊಂಡಿತು. ಇದರಿಂದ ಸಂಚಾರ ಸ್ಥಗಿತಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಕುಮಟಾ ತಾಲ್ಲೂಕಿನ ಬರ್ಗಿ ಸಮೀಪ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಕುಸಿದ ಗುಡ್ಡದ ಮಣ್ಣನ್ನು ತೆರವುಗೊಳಿಸುವ ವೇಳೆ ಪುನಃ ಗುಡ್ಡ ಕುಸಿದಿದೆ.</p><p>ಗುರುವಾರ ಬೆಳಿಗ್ಗೆ ಗುಡ್ಡ ಕುಸಿದಿದ್ದರಿಂದ ಕುಮಟಾ-ಗೋಕರ್ಣ ಮಾರ್ಗದ ಒಂದು ಭಾಗದಲ್ಲಿ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಇನ್ನೊಂದು ಮಾರ್ಗದ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯ ನಡೆದಿತ್ತು.</p><p>ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸುವಾಗಲೆ ಗುಡ್ಡದಿಂದ ವ್ಯಾಪಕ ಪ್ರಮಾಣದ ಮಣ್ಣು ಕುಸಿದು, ಎರಡೂ ಪಥವನ್ನೂ ಆವರಿಸಿಕೊಂಡಿತು. ಇದರಿಂದ ಸಂಚಾರ ಸ್ಥಗಿತಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>