ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂದ್‍ಸಾಗರ: ರೈಲು ಹಳಿ ಮೇಲೆ ಭೂಕುಸಿತ

Published 17 ಜುಲೈ 2023, 16:21 IST
Last Updated 17 ಜುಲೈ 2023, 16:21 IST
ಅಕ್ಷರ ಗಾತ್ರ

ಕಾರವಾರ: ಪಶ್ಚಿಮ ಘಟ್ಟ ಭಾಗದ ಅಲ್ಲಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್‍ಸಾಗರ ಜಲಪಾತದ ಸಮೀಪ ರೈಲ್ವೆ ಸುರಂಗ ಮಾರ್ಗದ ಎದುರು ಹಳಿಗಳ ಮೇಲೆ ಸೋಮವಾರ ನಸುಕಿನ ಜಾವ ಭೂಕುಸಿತ ಸಂಭವಿಸಿದೆ.

ಬೃಹತ್ ಗಾತ್ರದ ಕಲ್ಲುಗಳು, ಮಣ್ಣಿನ ರಾಶಿ ಬಿದ್ದು ಹಳಿಗಳನ್ನು ಮುಚ್ಚಿ ಹಾಕಿತ್ತು. ನೈರುತ್ಯ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತೆರವು ಕಾರ್ಯ ನಡೆಸಿದರು.

‘ರೈಲು ಸಂಚಾರಕ್ಕೆ ಶೀಘ್ರ ಅನುವು ಮಾಡಿಕೊಟ್ಟಿರುವುದರಿಂದ ಸಂಚಾರ ವ್ಯತ್ಯಯ ಆಗಿಲ್ಲ’ ಎಂದು ರೈಲ್ವೆ ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ‌.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT