ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಗ್ರಾಮಸ್ಥ ವಿನೋದ ಆರ್.ಗಾಂವ್ಕರ್, ‘25 ವರ್ಷಗಳ ಹಿಂದೆ ಸೀಬರ್ಡ್ ನೌಕಾನೆಲೆ ಯೋಜನೆಗಾಗಿ ನಾವು ಜಮೀನು ಕಳೆದುಕೊಂಡಿದ್ದೆವು. ಅಲ್ಲಿಂದ ಬಂದು ಇಲ್ಲಿ ನೆಲೆಸಿದ್ದೇವೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕಳೆದುಕೊಳ್ಳಲು ಸಿದ್ಧವಿಲ್ಲ. ನಮ್ಮ ಗ್ರಾಮದಲ್ಲಿ ಅದರ ಅಗತ್ಯವಿಲ್ಲ’ ಎಂದು ಹೇಳಿದರು.