<p><strong>ಯಲ್ಲಾಪುರ</strong>: 'ಕನ್ನಡ ಭಾಷೆ, ಇಲ್ಲಿನ ನೆಲ-ಜಲಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಅದೇ ನಾವು ಈ ನೆಲಕ್ಕೆ ಸಲ್ಲಿಸಬೇಕಾದ ಗೌರವ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ಕನ್ನಡ ಎಲ್ಲರ ಆಡು ಭಾಷೆಯಾಗಬೇಕು. ಆಗ ಮಾತ್ರ ಅದು ಉಳಿಯುತ್ತದೆ, ಬೆಳೆಯುತ್ತದೆ' ಎಂದರು.</p>.<p>ತಹಶೀಲ್ದಾರ ಚಂದ್ರಶೇಖರ ಹೊಸಮನಿ ಮಾತನಾಡಿ, 'ಆಚರಣೆಗಳು ಕೇವಲ ಸಾಂಕೇತಿಕವಾಗದೇ ನಮ್ಮ ಬದ್ದತೆಯ ಪ್ರತೀಕವಾಗಬೇಕು' ಎಂದರು.</p>.<p>ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ಮತ್ತು ಇಲಾಖೆಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು. ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ರೈತ ಗೀತೆ ಹಾಡಿದರು,</p>.<p>ಬಿಇಒ ರೇಖಾ ನಾಯ್ಕ ಸ್ವಾಗತಿಸಿದರು. ಶಿಕ್ಷಣ ಇಲಾಖೆ ಅಧಿಕಾರಿ ಪ್ರಶಾಂತ ಜಿ.ಎನ್ ವಂದಿಸಿದರು. ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಧನವಾಡಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ್ ಶಾನಭಾಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: 'ಕನ್ನಡ ಭಾಷೆ, ಇಲ್ಲಿನ ನೆಲ-ಜಲಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಅದೇ ನಾವು ಈ ನೆಲಕ್ಕೆ ಸಲ್ಲಿಸಬೇಕಾದ ಗೌರವ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ಕನ್ನಡ ಎಲ್ಲರ ಆಡು ಭಾಷೆಯಾಗಬೇಕು. ಆಗ ಮಾತ್ರ ಅದು ಉಳಿಯುತ್ತದೆ, ಬೆಳೆಯುತ್ತದೆ' ಎಂದರು.</p>.<p>ತಹಶೀಲ್ದಾರ ಚಂದ್ರಶೇಖರ ಹೊಸಮನಿ ಮಾತನಾಡಿ, 'ಆಚರಣೆಗಳು ಕೇವಲ ಸಾಂಕೇತಿಕವಾಗದೇ ನಮ್ಮ ಬದ್ದತೆಯ ಪ್ರತೀಕವಾಗಬೇಕು' ಎಂದರು.</p>.<p>ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ಮತ್ತು ಇಲಾಖೆಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು. ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ರೈತ ಗೀತೆ ಹಾಡಿದರು,</p>.<p>ಬಿಇಒ ರೇಖಾ ನಾಯ್ಕ ಸ್ವಾಗತಿಸಿದರು. ಶಿಕ್ಷಣ ಇಲಾಖೆ ಅಧಿಕಾರಿ ಪ್ರಶಾಂತ ಜಿ.ಎನ್ ವಂದಿಸಿದರು. ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಧನವಾಡಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ್ ಶಾನಭಾಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>