ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಣ್ಣ ಬಿಜೆಪಿಗಿಂತ ಹೆಚ್ಚು ಅನುದಾನ ತಂದು ತೋರಿಸಲಿ: ಕಾಗೇರಿ ಸವಾಲು

Published 30 ಮೇ 2023, 14:01 IST
Last Updated 30 ಮೇ 2023, 14:01 IST
ಅಕ್ಷರ ಗಾತ್ರ

ಶಿರಸಿ: ‘ಶಾಸಕ ಭೀಮಣ್ಣ ನಾಯ್ಕ ಬಿಜೆಪಿ ಸರ್ಕಾರ ಮಂಜೂರಿಗೊಳಿಸಿದ ಕಾಮಗಾರಿ ಮಾಡುವುದರ ಜತೆಗೆ ಈಗಿನ ಅನುದಾನಕ್ಕಿಂತ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಲಿ’ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ದೀನದಯಾಳ ಸಭಾಂಗಣದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಕೃತಜ್ಞತಾ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡು‌ ಅವರು  ಮಾತನಾಡಿದರು.

ಮತದಾರರು ಹಾಗೂ ಸರ್ಕಾರ ಕೊಟ್ಟ ಗ್ಯಾರಂಟಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡುವಲ್ಲಿ ನೂತನ ಶಾಸಕರು ಆಸಕ್ತರಾಗಬೇಕು‌ ಎಂದರು. 

ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನರಸಿಂಹ ಹೆಗಡೆ ಬಕ್ಕಳ, ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ಟ, ಪ್ರಮುಖರಾದ ಉಷಾ ಹೆಗಡೆ, ಉಮೇಶ ಬಂಕಾಪುರ, ಆರ್.ಡಿ.ಹೆಗಡೆ, ಸುರೇಶ್ಚಂದ್ರ ಹೆಗಡೆ ಮಾತನಾಡಿದರು. ಗ್ರಾಮೀಣ ಮಂಡಲ ಕಾರ್ಯದರ್ಶಿ ರಘುಪತಿ ಭಟ್ಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT