<p><strong>ಕಾರವಾರ:</strong> ‘ಬಿ.ಜೆ.ಪಿ.ಯವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಹಳ ಶಕ್ತಿಯಿದೆ. ಅವರು ಎಷ್ಟು ಬೇಕಾದರೂ ನಿಗಮಗಳು, ಯಾವ ಸಮಾಜಕ್ಕಾದರೂ ಸ್ಥಾನಮಾನಗಳನ್ನು ಕೊಡಬಹುದು’ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಹೇಳಿದರು.</p>.<p>ಶಿರಸಿಯಲ್ಲಿ ಶನಿವಾರ ನಡೆಯಲಿರುವ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಸಂಜೆ ಕಾರವಾರಕ್ಕೆ ಅವರು ಬಂದಾಗ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಿ.ಜೆ.ಪಿ.ಯ ಕಾರ್ಯಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಅವರೇನು ಬೇಕಾದರೂ ಮಾಡಲಿ. ಅವರು ತಮ್ಮನ್ನು ತಾವು ಸರ್ವತಂತ್ರ ಸ್ವತಂತ್ರರು ಎಂದುಕೊಂಡಿದ್ದಾರೆ. ಅವರ ಬಳಿ ಅಧಿಕಾರವಿದೆ. ಅದೇನು ಮಾಡುತ್ತಾರೋ ಎಲ್ಲವನ್ನೂ ಮಾಡಲಿ, ನೋಡೋಣ’ ಎಂದು ಹೇಳಿದರು.</p>.<p>ಬಿ.ಜೆ.ಪಿ.ಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಆದರೆ, ಇಲ್ಲಿಂದ (ಬೇರೆ ಪಕ್ಷಗಳಿಂದ) ಹೋದ ಕೆಲವರು ಅವರಿಗೇನು ಉಡುಗೊರೆ ಕೊಡಬೇಕೋ ಅದನ್ನು ಕೊಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಬಿ.ಜೆ.ಪಿ.ಯವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಹಳ ಶಕ್ತಿಯಿದೆ. ಅವರು ಎಷ್ಟು ಬೇಕಾದರೂ ನಿಗಮಗಳು, ಯಾವ ಸಮಾಜಕ್ಕಾದರೂ ಸ್ಥಾನಮಾನಗಳನ್ನು ಕೊಡಬಹುದು’ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಹೇಳಿದರು.</p>.<p>ಶಿರಸಿಯಲ್ಲಿ ಶನಿವಾರ ನಡೆಯಲಿರುವ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಸಂಜೆ ಕಾರವಾರಕ್ಕೆ ಅವರು ಬಂದಾಗ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಿ.ಜೆ.ಪಿ.ಯ ಕಾರ್ಯಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಅವರೇನು ಬೇಕಾದರೂ ಮಾಡಲಿ. ಅವರು ತಮ್ಮನ್ನು ತಾವು ಸರ್ವತಂತ್ರ ಸ್ವತಂತ್ರರು ಎಂದುಕೊಂಡಿದ್ದಾರೆ. ಅವರ ಬಳಿ ಅಧಿಕಾರವಿದೆ. ಅದೇನು ಮಾಡುತ್ತಾರೋ ಎಲ್ಲವನ್ನೂ ಮಾಡಲಿ, ನೋಡೋಣ’ ಎಂದು ಹೇಳಿದರು.</p>.<p>ಬಿ.ಜೆ.ಪಿ.ಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಆದರೆ, ಇಲ್ಲಿಂದ (ಬೇರೆ ಪಕ್ಷಗಳಿಂದ) ಹೋದ ಕೆಲವರು ಅವರಿಗೇನು ಉಡುಗೊರೆ ಕೊಡಬೇಕೋ ಅದನ್ನು ಕೊಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>