<p><strong>ಸಿದ್ದಾಪುರ:</strong> ‘ಮುಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ವೇತನ ವಿಳಂಬ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ತಾಲ್ಲೂಕು ಸಂಘದಿಂದ ಸ್ಥಳೀಯ ತಹಶೀಲ್ದಾರ್ಗೆ ಗುರುವಾರ ಮನವಿ ಸಲ್ಲಿಸಲಾಯಿತು.</p>.<p>‘ಇದು ಒಂದು ಗ್ರಂಥಾಲಯದ ಸಮಸ್ಯೆಯಲ್ಲ, ಹಲವು ಗ್ರಂಥಾಲಯ ಮೇಲ್ವಿಚಾರಕರ ಸಮಸ್ಯೆಯಾಗಿದೆ. ಸರ್ಕಾರದಿಂದ ಕನಿಷ್ಠ ವೇತನ ನಿಗದಿ ಆಗಿದ್ದರೂ ₹12 ಸಾವಿರ ಮಾತ್ರ ಬಿಡುಗಡೆಯಾಗುತ್ತಿದೆ. ಉಳಿದ ಮೊತ್ತವು ಪಂಚಾಯಿತಿ ಉಪ ಕರದಿಂದ ಜಿಲ್ಲಾ ಪಂಚಾಯಿತಿ ಮೂಲಕ ಭರಿಸುವಂತಾಗಿದೆ. ಇದರಿಂದ ಕಾಲಕಾಲಕ್ಕೆ ಪೂರ್ಣ ಪ್ರಮಾಣದ ಕನಿಷ್ಠ ವೇತನ ಕೈ ಸೇರದಂತಾಗಿದೆ’ ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.</p>.<p>‘ಮಹಿಳಾ ಸಿಬ್ಬಂದಿ ಹಿತದೃಷ್ಟಿಯಿಂದ ಸಂಜೆಯ ಕೆಲಸದ ಸಮಯವನ್ನು 6 ಗಂಟೆಯವರೆಗೆ ಮಾತ್ರ ನಿಗದಿಪಡಿಸಬೇಕು’ ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಸಂಘಟನೆಯ ಅಧ್ಯಕ್ಷ ವಿನಾಯಕ ಕೋಡ್ಸರ, ಕಾರ್ಯದರ್ಶಿ ಗಜಾನನ ನಾಯ್ಕ, ಮುಖಂಡ ವಿನಾಯಕ ಮುಕ್ರಿ, ಪದಾದಿಕಾರಿಗಳು, ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ‘ಮುಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ವೇತನ ವಿಳಂಬ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ತಾಲ್ಲೂಕು ಸಂಘದಿಂದ ಸ್ಥಳೀಯ ತಹಶೀಲ್ದಾರ್ಗೆ ಗುರುವಾರ ಮನವಿ ಸಲ್ಲಿಸಲಾಯಿತು.</p>.<p>‘ಇದು ಒಂದು ಗ್ರಂಥಾಲಯದ ಸಮಸ್ಯೆಯಲ್ಲ, ಹಲವು ಗ್ರಂಥಾಲಯ ಮೇಲ್ವಿಚಾರಕರ ಸಮಸ್ಯೆಯಾಗಿದೆ. ಸರ್ಕಾರದಿಂದ ಕನಿಷ್ಠ ವೇತನ ನಿಗದಿ ಆಗಿದ್ದರೂ ₹12 ಸಾವಿರ ಮಾತ್ರ ಬಿಡುಗಡೆಯಾಗುತ್ತಿದೆ. ಉಳಿದ ಮೊತ್ತವು ಪಂಚಾಯಿತಿ ಉಪ ಕರದಿಂದ ಜಿಲ್ಲಾ ಪಂಚಾಯಿತಿ ಮೂಲಕ ಭರಿಸುವಂತಾಗಿದೆ. ಇದರಿಂದ ಕಾಲಕಾಲಕ್ಕೆ ಪೂರ್ಣ ಪ್ರಮಾಣದ ಕನಿಷ್ಠ ವೇತನ ಕೈ ಸೇರದಂತಾಗಿದೆ’ ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.</p>.<p>‘ಮಹಿಳಾ ಸಿಬ್ಬಂದಿ ಹಿತದೃಷ್ಟಿಯಿಂದ ಸಂಜೆಯ ಕೆಲಸದ ಸಮಯವನ್ನು 6 ಗಂಟೆಯವರೆಗೆ ಮಾತ್ರ ನಿಗದಿಪಡಿಸಬೇಕು’ ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಸಂಘಟನೆಯ ಅಧ್ಯಕ್ಷ ವಿನಾಯಕ ಕೋಡ್ಸರ, ಕಾರ್ಯದರ್ಶಿ ಗಜಾನನ ನಾಯ್ಕ, ಮುಖಂಡ ವಿನಾಯಕ ಮುಕ್ರಿ, ಪದಾದಿಕಾರಿಗಳು, ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>