<p><strong>ಸಿದ್ದಾಪುರ</strong>: ‘ಸಾಹಿತ್ಯವು ಮನುಷ್ಯನ ಅಂತರಂಗವನ್ನು ಶುದ್ಧೀಕರಿಸುವ ಕೆಲಸ ಮಾಡುತ್ತದೆ. ಲಲಿತ ಪ್ರಬಂಧಗಳು ಕೇವಲ ಹಾಸ್ಯಕ್ಕಷ್ಟೇ ಸೀಮಿತವಲ್ಲ, ಅವು ಬದುಕಿನ ಕಟು ಸತ್ಯಗಳನ್ನು ಅತ್ಯಂತ ಸರಳವಾಗಿ ಮತ್ತು ರಂಜನೀಯವಾಗಿ ವಿವರಿಸುವ ಶಕ್ತಿಯನ್ನು ಹೊಂದಿವೆ’ ಎಂದು ಹಿರಿಯ ಸಾಹಿತಿ ಸುಬ್ರಾಯ ಮತ್ತಿಹಳ್ಳಿ ಹೇಳಿದರು.</p>.<p>ಪಟ್ಟಣದ ಬಾಲಭವನದಲ್ಲಿ ಕರ್ಜಗಿ ಮನು ವಿಕಾಸ ಸಂಸ್ಥೆ ಸಹಯೋಗದಲ್ಲಿ ಶನಿವಾರ ಲೇಖಕ ರಾಜು ಅಡಕಳ್ಳಿ ಅವರ ಹೊಸ ಸಾಹಿತ್ಯಿಕ ಕೊಡುಗೆಗಳಾದ ‘ಹಾಸ್ಯ ವಿಲಾಸ‘ ಮತ್ತು ‘ರಸಗುಲ್ಲಾ‘ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಇಸ್ರೇಲ್ನಂತಹ ಪುಟ್ಟ ದೇಶದಲ್ಲಿ ಓದಿನ ಸಂಸ್ಕೃತಿ ಜೀವನದ ಭಾಗವಾಗಿದೆ. ಕನ್ನಡದಲ್ಲೂ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಗುಣಮಟ್ಟದ ಕೃತಿಗಳು ಬರಬೇಕು ಮತ್ತು ಓದುವ ಹವ್ಯಾಸ ಬೆಳೆಯಬೇಕು’ ಎಂದು ಆಶಿಸಿದರು.</p>.<p>ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹಾಸ್ಯ ವಿಲಾಸ ಮತ್ತು ರಸಗುಲ್ಲಾ ಕೃತಿಗಳನ್ನು ಬಿಡುಗಡೆಗೊಳಿಸಿದರು.</p>.<p>ಕೃತಿಕಾರ ರಾಜು ಅಡಕಳ್ಳಿ ಮಾತನಾಡಿ, ‘ಈ ಸಮಾರಂಭವು ಕೇವಲ ಪುಸ್ತಕ ಬಿಡುಗಡೆಯಲ್ಲ. ಬದಲಾಗಿ ಅದೊಂದು 'ಪುಸ್ತಕ ಸಂಸ್ಕೃತಿ'ಯ ಭಾಗ’ ಎಂದು ಅಭಿಪ್ರಾಯಪಟ್ಟರು.</p>.<p>ಕಲಾವಿದ ಸತೀಶ ಯಲ್ಲಾಪುರ, ವಕೀಲ ರವಿ ಹೆಗಡೆ ಹೂವಿನಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಮನುವಿಕಾಸ ಸಂಸ್ಥೆಯ ಮುಖ್ಯಸ್ಥ ಗಣಪತಿ ಭಟ್ ಕರ್ಜಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಘವೇಂದ್ರ ಬೆಟ್ಟಕೊಪ್ಪ ಕಾರ್ಯಕ್ರಮ ನಿರ್ವಹಿಸಿದರು. ಗಾಯತ್ರಿ ರಾಘವೇಂದ್ರ ಪ್ರಾರ್ಥಿಸಿದರು. ಶ್ರೀಕಾಂತ ಹೆಗಡೆ ಸ್ವಾಗತಿಸಿದರು. ಎಂ.ಜಿ.ಹೆಗಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ‘ಸಾಹಿತ್ಯವು ಮನುಷ್ಯನ ಅಂತರಂಗವನ್ನು ಶುದ್ಧೀಕರಿಸುವ ಕೆಲಸ ಮಾಡುತ್ತದೆ. ಲಲಿತ ಪ್ರಬಂಧಗಳು ಕೇವಲ ಹಾಸ್ಯಕ್ಕಷ್ಟೇ ಸೀಮಿತವಲ್ಲ, ಅವು ಬದುಕಿನ ಕಟು ಸತ್ಯಗಳನ್ನು ಅತ್ಯಂತ ಸರಳವಾಗಿ ಮತ್ತು ರಂಜನೀಯವಾಗಿ ವಿವರಿಸುವ ಶಕ್ತಿಯನ್ನು ಹೊಂದಿವೆ’ ಎಂದು ಹಿರಿಯ ಸಾಹಿತಿ ಸುಬ್ರಾಯ ಮತ್ತಿಹಳ್ಳಿ ಹೇಳಿದರು.</p>.<p>ಪಟ್ಟಣದ ಬಾಲಭವನದಲ್ಲಿ ಕರ್ಜಗಿ ಮನು ವಿಕಾಸ ಸಂಸ್ಥೆ ಸಹಯೋಗದಲ್ಲಿ ಶನಿವಾರ ಲೇಖಕ ರಾಜು ಅಡಕಳ್ಳಿ ಅವರ ಹೊಸ ಸಾಹಿತ್ಯಿಕ ಕೊಡುಗೆಗಳಾದ ‘ಹಾಸ್ಯ ವಿಲಾಸ‘ ಮತ್ತು ‘ರಸಗುಲ್ಲಾ‘ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಇಸ್ರೇಲ್ನಂತಹ ಪುಟ್ಟ ದೇಶದಲ್ಲಿ ಓದಿನ ಸಂಸ್ಕೃತಿ ಜೀವನದ ಭಾಗವಾಗಿದೆ. ಕನ್ನಡದಲ್ಲೂ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಗುಣಮಟ್ಟದ ಕೃತಿಗಳು ಬರಬೇಕು ಮತ್ತು ಓದುವ ಹವ್ಯಾಸ ಬೆಳೆಯಬೇಕು’ ಎಂದು ಆಶಿಸಿದರು.</p>.<p>ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹಾಸ್ಯ ವಿಲಾಸ ಮತ್ತು ರಸಗುಲ್ಲಾ ಕೃತಿಗಳನ್ನು ಬಿಡುಗಡೆಗೊಳಿಸಿದರು.</p>.<p>ಕೃತಿಕಾರ ರಾಜು ಅಡಕಳ್ಳಿ ಮಾತನಾಡಿ, ‘ಈ ಸಮಾರಂಭವು ಕೇವಲ ಪುಸ್ತಕ ಬಿಡುಗಡೆಯಲ್ಲ. ಬದಲಾಗಿ ಅದೊಂದು 'ಪುಸ್ತಕ ಸಂಸ್ಕೃತಿ'ಯ ಭಾಗ’ ಎಂದು ಅಭಿಪ್ರಾಯಪಟ್ಟರು.</p>.<p>ಕಲಾವಿದ ಸತೀಶ ಯಲ್ಲಾಪುರ, ವಕೀಲ ರವಿ ಹೆಗಡೆ ಹೂವಿನಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಮನುವಿಕಾಸ ಸಂಸ್ಥೆಯ ಮುಖ್ಯಸ್ಥ ಗಣಪತಿ ಭಟ್ ಕರ್ಜಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಘವೇಂದ್ರ ಬೆಟ್ಟಕೊಪ್ಪ ಕಾರ್ಯಕ್ರಮ ನಿರ್ವಹಿಸಿದರು. ಗಾಯತ್ರಿ ರಾಘವೇಂದ್ರ ಪ್ರಾರ್ಥಿಸಿದರು. ಶ್ರೀಕಾಂತ ಹೆಗಡೆ ಸ್ವಾಗತಿಸಿದರು. ಎಂ.ಜಿ.ಹೆಗಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>