ಹೆದ್ದಾರಿ ದಕ್ಷಿಣ ಭಾಗದಲ್ಲಿ ಸಾರ್ವಜನಿಕರಿಗೆ ಓಡಾಡಲು ಸರ್ವೀಸ್ ರಸ್ತೆ, ಚರಂಡಿ, ವಿದ್ಯುತ್ ಕಂಬಗಳ ಅಳವಡಿಕೆ ಮಾಡಿಲ್ಲ. ಈ ಭಾಗದಲ್ಲಿ ಭೂ ಸ್ವಾಧೀನ ಇಲಾಖೆಯವರು ಕೆಲವು ಮನೆಗಳಿಗೆ ಲಕ್ಷಾಂತರ ರೂಪಾಯಿ ಪರಿಹಾರ ನೀಡಿದ್ದಾರೆ. ಆದರೂ ಜಾಗವನ್ನು ವಶಪಡಿಸಿಕೊಂಡಿಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಾದರೆ ಮಾತ್ರ ಹೆದ್ದಾರಿ ಕಾಮಗಾರಿ ಸುಗಮವಾದೀತು.