<p><strong>ಕಾರವಾರ: </strong>ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಿಣಗಾದ ಮಾಳಸಾ ರಸ್ತೆ ಕ್ರಾಸ್ನಿಂದ ಅಂಚೆ ಕಚೇರಿವರೆಗೆ ಚತುಷ್ಪಥ ಕಾಮಗಾರಿ ಸಂದರ್ಭದಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಿಸಿಲ್ಲ.</p>.<p>ಬಿಣಗಾದಿಂದ ಕಾರವಾರದತ್ತ ಸಾಗುವ ಹೆದ್ದಾರಿಯು ಮಾಳಸಾ ಕ್ರಾಸ್ ಮೂಲಕ ಸಾಗುತ್ತದೆ. ಇಲ್ಲಿ ರಸ್ತೆಗೆ ‘ಯು ಟರ್ನ್’ ನೀಡಲಾಗಿದೆ. ಈ ಸ್ಥಳವು ಅತ್ಯಂತ ಕಿರಿದಾಗಿದೆ. ಇಲ್ಲಿ ವಾಹನಗಳು ತಿರುವು ಪಡೆಯುವಾಗ ಅಪಘಾತವಾಗುವ ಸಾಧ್ಯತೆಯಿದೆ.</p>.<p>ಹೆದ್ದಾರಿ ದಕ್ಷಿಣ ಭಾಗದಲ್ಲಿ ಸಾರ್ವಜನಿಕರಿಗೆ ಓಡಾಡಲು ಸರ್ವೀಸ್ ರಸ್ತೆ, ಚರಂಡಿ, ವಿದ್ಯುತ್ ಕಂಬಗಳ ಅಳವಡಿಕೆ ಮಾಡಿಲ್ಲ. ಈ ಭಾಗದಲ್ಲಿ ಭೂ ಸ್ವಾಧೀನ ಇಲಾಖೆಯವರು ಕೆಲವು ಮನೆಗಳಿಗೆ ಲಕ್ಷಾಂತರ ರೂಪಾಯಿ ಪರಿಹಾರ ನೀಡಿದ್ದಾರೆ. ಆದರೂ ಜಾಗವನ್ನು ವಶಪಡಿಸಿಕೊಂಡಿಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಾದರೆ ಮಾತ್ರ ಹೆದ್ದಾರಿ ಕಾಮಗಾರಿ ಸುಗಮವಾದೀತು.</p>.<p>ಪದೇ ಪದೇ ಮನವಿ ನೀಡಿದರೂ ಯಾವುದೇ ಕ್ರಮವಾಗದಿರುವ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.</p>.<p>– ವಿಷ್ಣು ಹರಿಕಾಂತ, ಶ್ರೀಧರ ಬಿಣಗೆ, ವಿಠ್ಠಲ ಯು.ನಾಯ್ಕ ಮತ್ತು ಪದಾಧಿಕಾರಿಗಳು.</p>.<p>ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕ, ಬಿಣಗಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಿಣಗಾದ ಮಾಳಸಾ ರಸ್ತೆ ಕ್ರಾಸ್ನಿಂದ ಅಂಚೆ ಕಚೇರಿವರೆಗೆ ಚತುಷ್ಪಥ ಕಾಮಗಾರಿ ಸಂದರ್ಭದಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಿಸಿಲ್ಲ.</p>.<p>ಬಿಣಗಾದಿಂದ ಕಾರವಾರದತ್ತ ಸಾಗುವ ಹೆದ್ದಾರಿಯು ಮಾಳಸಾ ಕ್ರಾಸ್ ಮೂಲಕ ಸಾಗುತ್ತದೆ. ಇಲ್ಲಿ ರಸ್ತೆಗೆ ‘ಯು ಟರ್ನ್’ ನೀಡಲಾಗಿದೆ. ಈ ಸ್ಥಳವು ಅತ್ಯಂತ ಕಿರಿದಾಗಿದೆ. ಇಲ್ಲಿ ವಾಹನಗಳು ತಿರುವು ಪಡೆಯುವಾಗ ಅಪಘಾತವಾಗುವ ಸಾಧ್ಯತೆಯಿದೆ.</p>.<p>ಹೆದ್ದಾರಿ ದಕ್ಷಿಣ ಭಾಗದಲ್ಲಿ ಸಾರ್ವಜನಿಕರಿಗೆ ಓಡಾಡಲು ಸರ್ವೀಸ್ ರಸ್ತೆ, ಚರಂಡಿ, ವಿದ್ಯುತ್ ಕಂಬಗಳ ಅಳವಡಿಕೆ ಮಾಡಿಲ್ಲ. ಈ ಭಾಗದಲ್ಲಿ ಭೂ ಸ್ವಾಧೀನ ಇಲಾಖೆಯವರು ಕೆಲವು ಮನೆಗಳಿಗೆ ಲಕ್ಷಾಂತರ ರೂಪಾಯಿ ಪರಿಹಾರ ನೀಡಿದ್ದಾರೆ. ಆದರೂ ಜಾಗವನ್ನು ವಶಪಡಿಸಿಕೊಂಡಿಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಾದರೆ ಮಾತ್ರ ಹೆದ್ದಾರಿ ಕಾಮಗಾರಿ ಸುಗಮವಾದೀತು.</p>.<p>ಪದೇ ಪದೇ ಮನವಿ ನೀಡಿದರೂ ಯಾವುದೇ ಕ್ರಮವಾಗದಿರುವ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.</p>.<p>– ವಿಷ್ಣು ಹರಿಕಾಂತ, ಶ್ರೀಧರ ಬಿಣಗೆ, ವಿಠ್ಠಲ ಯು.ನಾಯ್ಕ ಮತ್ತು ಪದಾಧಿಕಾರಿಗಳು.</p>.<p>ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕ, ಬಿಣಗಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>