ಭಟ್ಕಳದಲ್ಲಿಮತ್ತೆ ಕೋವಿಡ್ 19 ಪ್ರಕರಣಗಳು ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪಟ್ಟಣದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ತೆರೆಯಲು ಅವಕಾಶ ನೀಡಲಾಗಿದೆ. ತಾಲ್ಲೂಕಿನ ಶಿರಾಲಿ, ಕಾಯ್ಕಿಣಿ, ಮುರ್ಡೇಶ್ವರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಸೇರಿದಂತೆ ಎಲ್ಲ ರೀತಿಯ ವ್ಯವಹಾರಗಳಿಗೆಅವಕಾಶ ನೀಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಭರತ್.ಎಸ್ ಮಾಹಿತಿ ನೀಡಿದರು.