ಜಿಲ್ಲಾ ಘಟಕ, ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಮೂವರು ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜಿಲ್ಲಾ ಘಟಕಕ್ಕೆ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದ ಸಿದ್ದಾಪುರದ ನಾಗರಾಜ ನಾಯ್ಕ ಬೇಡ್ಕಣಿ, ಕೃಷ್ಣಮೂರ್ತಿ ಮಡಿವಾಳ ಹಾಗೂ ಸಿದ್ದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಎಸ್.ಕೆ.ಮೇಸ್ತ ರಾಜೀನಾಮೆ ಸಲ್ಲಿಸಿದವರು.