<p><strong>ಶಿರಸಿ:</strong> ಚುನಾವಣೆಯು ಪಾರದರ್ಶಕ ಮತ್ತು ಉತ್ತಮ ರೀತಿಯಲ್ಲಿ ನಡೆಯುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಅಪರ್ಣ ರಮೇಶ ತಿಳಿಸಿದರು.</p>.<p>ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ ತಾಲ್ಲೂಕಿನಲ್ಲಿ 148 ಹಾಗೂ ಸಿದ್ದಾಪುರ ತಾಲ್ಲೂಕಿನಲ್ಲಿ 118 ಮತಗಟ್ಟೆಗಳು ಸೇರಿದಂತೆ ಒಟ್ಟು 266 ಮತಗಟ್ಟೆಗಳಿವೆ. 1,01,484 ಪುರುಷ, 1,01,163 ಮಹಿಳಾ, 1 ಇತರೆ, 139 ಸೇವಾ ಮತದಾರರು ಸೇರಿದಂತೆ ಒಟ್ಟು 2,02,648 ಮತದಾರರಿದ್ದಾರೆ ಎಂದರು.</p>.<p>ಚುನಾವಣಾ ಕಾರ್ಯ ಸುಗಮವಾಗಿ ನಿರ್ವಹಿಸಲು ವಿವಿಧ ತಂಡಗಳನ್ನು ರಚಿಸಲಾಗಿದೆ. ಶಿರಸಿಯಲ್ಲಿ 14, ಸಿದ್ದಾಪುರದಲ್ಲಿ 12 ಸೇರಿದಂತೆ ಒಟ್ಟು 26 ಸೆಕ್ಟರ್ ಆಫೀಸರ್, ಅಕೌಂಟಿಂಗ್ ಟೀಮ್ 1, ವಿವಿಟಿ 1, ಶಿರಸಿ 6, ಸಿದ್ದಾಪುರ 3 ಒಟ್ಟು 9 ವಿಎಸ್.ಟಿ, ಶಿರಸಿಯಲ್ಲಿ 1 ಮತ್ತು ಸಿದ್ದಾಪುರದಲ್ಲಿ 2 ತನಿಖಾ ಠಾಣೆ ತೆರೆಯಲಾಗಿದೆ ಎಂದು ಹೇಳಿದರು.</p>.<p>ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ಎಸ್.ಟಿ ಹಾಗೂ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಶಿರಳಗಿ, ಚೂರಿಕಟ್ಟೆ, ಚಿಪಗಿಯಲ್ಲಿ ತನಿಖಾ ಠಾಣೆ ಬಿಗಿಗೊಳಿಸಲಾಗಿದೆ. ಚುನಾವಣೆಗೆ ಸಂಬಂಧಿ ದೂರುಗಳಿದ್ದರೆ 08384-226382 ಸಂಪರ್ಕಿಸಬಹುದು. ಮತದಾರರ ಮಾಹಿತಿ, ಅಭ್ಯರ್ಥಿಗಳ ಮಾಹಿತಿ, ಮತಗಟ್ಟೆಗಳ ಮಾಹಿತಿ, ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದೆ ಎಂದರು.</p>.<p>ಮಾರಿಕಾಂಬಾ ಜಾತ್ರೆಗೆ ವೈಯಕ್ತಿಕವಾಗಿ ಶುಭ ಕೋರುವ ಜಾಹೀರಾತು, ಬ್ಯಾನರ್ ಮಾತ್ರ ಬಳಸಬೇಕು. ಪಕ್ಷದ ಚಿಹ್ನೆ, ಹೆಸರು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮದುವೆ ಸೇರಿದಂತೆ ಇನ್ನಿತರ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿ ಅಥವಾ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪರವಾನಗಿ ಪಡೆಯಬೇಕು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಚುನಾವಣೆಯು ಪಾರದರ್ಶಕ ಮತ್ತು ಉತ್ತಮ ರೀತಿಯಲ್ಲಿ ನಡೆಯುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಅಪರ್ಣ ರಮೇಶ ತಿಳಿಸಿದರು.</p>.<p>ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ ತಾಲ್ಲೂಕಿನಲ್ಲಿ 148 ಹಾಗೂ ಸಿದ್ದಾಪುರ ತಾಲ್ಲೂಕಿನಲ್ಲಿ 118 ಮತಗಟ್ಟೆಗಳು ಸೇರಿದಂತೆ ಒಟ್ಟು 266 ಮತಗಟ್ಟೆಗಳಿವೆ. 1,01,484 ಪುರುಷ, 1,01,163 ಮಹಿಳಾ, 1 ಇತರೆ, 139 ಸೇವಾ ಮತದಾರರು ಸೇರಿದಂತೆ ಒಟ್ಟು 2,02,648 ಮತದಾರರಿದ್ದಾರೆ ಎಂದರು.</p>.<p>ಚುನಾವಣಾ ಕಾರ್ಯ ಸುಗಮವಾಗಿ ನಿರ್ವಹಿಸಲು ವಿವಿಧ ತಂಡಗಳನ್ನು ರಚಿಸಲಾಗಿದೆ. ಶಿರಸಿಯಲ್ಲಿ 14, ಸಿದ್ದಾಪುರದಲ್ಲಿ 12 ಸೇರಿದಂತೆ ಒಟ್ಟು 26 ಸೆಕ್ಟರ್ ಆಫೀಸರ್, ಅಕೌಂಟಿಂಗ್ ಟೀಮ್ 1, ವಿವಿಟಿ 1, ಶಿರಸಿ 6, ಸಿದ್ದಾಪುರ 3 ಒಟ್ಟು 9 ವಿಎಸ್.ಟಿ, ಶಿರಸಿಯಲ್ಲಿ 1 ಮತ್ತು ಸಿದ್ದಾಪುರದಲ್ಲಿ 2 ತನಿಖಾ ಠಾಣೆ ತೆರೆಯಲಾಗಿದೆ ಎಂದು ಹೇಳಿದರು.</p>.<p>ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ಎಸ್.ಟಿ ಹಾಗೂ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಶಿರಳಗಿ, ಚೂರಿಕಟ್ಟೆ, ಚಿಪಗಿಯಲ್ಲಿ ತನಿಖಾ ಠಾಣೆ ಬಿಗಿಗೊಳಿಸಲಾಗಿದೆ. ಚುನಾವಣೆಗೆ ಸಂಬಂಧಿ ದೂರುಗಳಿದ್ದರೆ 08384-226382 ಸಂಪರ್ಕಿಸಬಹುದು. ಮತದಾರರ ಮಾಹಿತಿ, ಅಭ್ಯರ್ಥಿಗಳ ಮಾಹಿತಿ, ಮತಗಟ್ಟೆಗಳ ಮಾಹಿತಿ, ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದೆ ಎಂದರು.</p>.<p>ಮಾರಿಕಾಂಬಾ ಜಾತ್ರೆಗೆ ವೈಯಕ್ತಿಕವಾಗಿ ಶುಭ ಕೋರುವ ಜಾಹೀರಾತು, ಬ್ಯಾನರ್ ಮಾತ್ರ ಬಳಸಬೇಕು. ಪಕ್ಷದ ಚಿಹ್ನೆ, ಹೆಸರು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮದುವೆ ಸೇರಿದಂತೆ ಇನ್ನಿತರ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿ ಅಥವಾ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪರವಾನಗಿ ಪಡೆಯಬೇಕು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>