‘ಈ ಬಾರಿ ಭಾರತದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಸ್ಲಿಂ ಜಮಾತೆಗಳು ವಿದೇಶಗಳಲ್ಲಿ ನೆಲೆಸಿರುವ ಎಲ್ಲ ಭಟ್ಕಳದ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಅಲ್ಲದೇ, ಮನುಷ್ಯತ್ವದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿ, ಪಕ್ಷಗಳ ಪರವಾಗಿ ಮತದಾನ ಮಾಡಬೇಕು’ ಎಂದು ಮುಖಂಡರು ಮತದಾರರನ್ನು ವಿನಂತಿಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಲಭಿಸಿವೆ.