<p><strong>ಕಾರವಾರ</strong>: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತಲಕರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು.</p><p>ಆಸ್ಪತ್ರೆಯ ಹಾಸಿಗೆಗೆ ಬೆಡ್ ಶೀಟ್ ಪೂರೈಸಿದ್ದಕ್ಕೆ ಬಿಲ್ ಮೊತ್ತ ಪಾವತಿಗೆ ಲಂಚ ಕೇಳಿದ್ದಾಗಿ ಅಧೀಕ್ಷಕರ ವಿರುದ್ಧ ಅಂಕೋಲಾದ ಗುತ್ತಿಗೆದಾರ ಮೊಹಸೀನ್ ಖಾನ್ ದೂರು ನೀಡಿದ್ದರು. ಗುರುವಾರ ₹30 ಸಾವಿರ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದರು.</p><p>'ಬೆಡಶೀಟ್ ಪೂರೈಸಿದ್ದಕ್ಕೆ ಕ್ರಿಮ್ಸ್ ನಿಂದ ₹3,34,200 ಬಿಲ್ ಪಾವತಿ ಬಾಕಿ ಇತ್ತು. ಅದನ್ನು ಬಿಡುಗಡೆ ಮಾಡಲು ₹50 ಸಾವಿರಕ್ಕೆ ಡಾ.ಶಿವಾನಂದ ಬೇಡಿಕೆ ಇಟ್ಟಿದ್ದರು. ಎರಡು ದಿನದ ಹಿಂದೆ ₹20 ಸಾವಿರ ನೀಡಿದ್ದೆ ಎಂದು ಗುತ್ತಿಗೆದಾರರು ದೂರು ನೀಡಿದ್ದರು. ಲಂಚ ನೀಡುವಾಗಲೇ ಅಧೀಕ್ಷಕರನ್ನು ವಶಕ್ಕೆ ಪಡೆಯಲಾಯಿತು' ಎಂದು ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ತಿಳಿಸಿದರು.</p><p>'ಆರೋಪಿಯು ಗ್ರೇಡ್-1 ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ಅವರ ಮನೆ, ಖಾಸಗಿ ಕಚೇರಿಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ' ಎಂದರು.</p><p>ಲೋಕಾಯುಕ್ತ ಉಡುಪಿ ಜಿಲ್ಲೆಯ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತಲಕರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು.</p><p>ಆಸ್ಪತ್ರೆಯ ಹಾಸಿಗೆಗೆ ಬೆಡ್ ಶೀಟ್ ಪೂರೈಸಿದ್ದಕ್ಕೆ ಬಿಲ್ ಮೊತ್ತ ಪಾವತಿಗೆ ಲಂಚ ಕೇಳಿದ್ದಾಗಿ ಅಧೀಕ್ಷಕರ ವಿರುದ್ಧ ಅಂಕೋಲಾದ ಗುತ್ತಿಗೆದಾರ ಮೊಹಸೀನ್ ಖಾನ್ ದೂರು ನೀಡಿದ್ದರು. ಗುರುವಾರ ₹30 ಸಾವಿರ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದರು.</p><p>'ಬೆಡಶೀಟ್ ಪೂರೈಸಿದ್ದಕ್ಕೆ ಕ್ರಿಮ್ಸ್ ನಿಂದ ₹3,34,200 ಬಿಲ್ ಪಾವತಿ ಬಾಕಿ ಇತ್ತು. ಅದನ್ನು ಬಿಡುಗಡೆ ಮಾಡಲು ₹50 ಸಾವಿರಕ್ಕೆ ಡಾ.ಶಿವಾನಂದ ಬೇಡಿಕೆ ಇಟ್ಟಿದ್ದರು. ಎರಡು ದಿನದ ಹಿಂದೆ ₹20 ಸಾವಿರ ನೀಡಿದ್ದೆ ಎಂದು ಗುತ್ತಿಗೆದಾರರು ದೂರು ನೀಡಿದ್ದರು. ಲಂಚ ನೀಡುವಾಗಲೇ ಅಧೀಕ್ಷಕರನ್ನು ವಶಕ್ಕೆ ಪಡೆಯಲಾಯಿತು' ಎಂದು ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ತಿಳಿಸಿದರು.</p><p>'ಆರೋಪಿಯು ಗ್ರೇಡ್-1 ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ಅವರ ಮನೆ, ಖಾಸಗಿ ಕಚೇರಿಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ' ಎಂದರು.</p><p>ಲೋಕಾಯುಕ್ತ ಉಡುಪಿ ಜಿಲ್ಲೆಯ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>