'ನದಿಯಲ್ಲಿ ನೀರಿನ ಹರಿವು ಸ್ವಲ್ಪ ಕಡಿಮೆಯಾಗಿದ್ದು, ಲಾರಿಯ ಕ್ಯಾಬಿನ್ನ ಮೇಲ್ಭಾಗ ಕಾಣತೊಡಗಿದೆ. ಕ್ರೇನ್ ಬಳಸಿ ಲಾರಿಯನ್ನು ಮೇಲಕ್ಕೆತ್ತಲಾಗುವುದು. ಕಾಣೆಯಾದ ವ್ಯಕ್ತಿ ಲಾರಿಯಲ್ಲಿ ಇಲ್ಲದಿದ್ದರೆ ಹುಡುಕಾಟಕ್ಕಾಗಿ ಕಾರ್ಯಾಚರಣೆ ಮುಂದುವರಿಸಲಾಗುವುದು' ಎಂದು ಯಲ್ಲಾಪುರ ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.