ಮುಂಜಾನೆ ಕಡವಾಡದಿಂದ ಮೆರವಣಿಗೆ ಮೂಲಕ ದೇವರನ್ನು ಕೋಡಿಬಾಗಕ್ಕೆ ಕರೆತರಲಾಯಿತು. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲಂಕೃತ ದೋಣಿಯಲ್ಲಿ ದ್ವೀಪಕ್ಕೆ ಕರೆದೊಯ್ದು ಪ್ರತಿಷ್ಠಾಪಿಸಲಾಯಿತು. ಸಪ್ರೆ ಕುಟುಂಬಸ್ಥರು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಉತ್ಸವಕ್ಕೆ ಚಾಲನೆ ಸಿಕ್ಕಿತು. ಭಕ್ತರು ಬಾಳೆಗೊನೆ, ತುಲಾಭಾರ, ಬಾವುಟ ಹರಕೆ ಸಲ್ಲಿಸಿದರು. ವಿಶೇಷ ಪೂಜೆ ನೀಡಿದರು.