<p>ಕಾರವಾರ: ‘ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ. ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದು’ ಎಂದು ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿಶಾಲ ಮನೋಧರ್ಮ ಮಡಿವಾಳ ಸಮುದಾಯದ ಜನರಲ್ಲಿದೆ. ಶಿವಶರಣ ಮಾಚಿದೇವರ ಮಾರ್ಗದರ್ಶನದಿಂದ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ. ಮಾಚಿದೇವ ಸಮಾಜದ ಕೊಳಕು ತೊಳೆದು ಹಾಕಿದವರು. ಕಾಯಕದ ಆಧಾರದಲ್ಲಿ ವಿಭಜನೆ ಆಗುತ್ತಿರುವ ಸಮಾಜಕ್ಕೆ ಮಾಚಿದೇವರ ಸಂದೇಶ ಆದರ್ಶವಾಗಬೇಕಾದ ಅಗತ್ಯವಿದೆ’ ಎಂದರು.</p>.<p>ಉಪನ್ಯಾಸ ನೀಡಿದ ಶಿಕ್ಷಕ ಗಣೇಶ ಭಿಷ್ಠಣ್ಣನವರ್, ‘ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾದರು’ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಮಡಿವಾಳ, ‘ಮಾಚಿದೇವ ಸಮಾಜದ ಶ್ರೇಷ್ಠ ವಚನಕಾರರಲ್ಲಿ ಒಬ್ಬರು’ ಎಂದರು.</p>.<p>ಮಡಿವಾಳ ಸಮಾಜದ ಅಧ್ಯಕ್ಷ ಶಾಂತಾ ಮಡಿವಾಳ, ಶಿಕ್ಷಕ ಮಹಾದೇವ ರಾಣೆ ಇದ್ದರು.</p>.<p>ಮಡಿವಾಳ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸುವಂತೆ ಸಮುದಾಯದ ಪ್ರಮುಖರು ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ. ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದು’ ಎಂದು ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿಶಾಲ ಮನೋಧರ್ಮ ಮಡಿವಾಳ ಸಮುದಾಯದ ಜನರಲ್ಲಿದೆ. ಶಿವಶರಣ ಮಾಚಿದೇವರ ಮಾರ್ಗದರ್ಶನದಿಂದ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ. ಮಾಚಿದೇವ ಸಮಾಜದ ಕೊಳಕು ತೊಳೆದು ಹಾಕಿದವರು. ಕಾಯಕದ ಆಧಾರದಲ್ಲಿ ವಿಭಜನೆ ಆಗುತ್ತಿರುವ ಸಮಾಜಕ್ಕೆ ಮಾಚಿದೇವರ ಸಂದೇಶ ಆದರ್ಶವಾಗಬೇಕಾದ ಅಗತ್ಯವಿದೆ’ ಎಂದರು.</p>.<p>ಉಪನ್ಯಾಸ ನೀಡಿದ ಶಿಕ್ಷಕ ಗಣೇಶ ಭಿಷ್ಠಣ್ಣನವರ್, ‘ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾದರು’ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಮಡಿವಾಳ, ‘ಮಾಚಿದೇವ ಸಮಾಜದ ಶ್ರೇಷ್ಠ ವಚನಕಾರರಲ್ಲಿ ಒಬ್ಬರು’ ಎಂದರು.</p>.<p>ಮಡಿವಾಳ ಸಮಾಜದ ಅಧ್ಯಕ್ಷ ಶಾಂತಾ ಮಡಿವಾಳ, ಶಿಕ್ಷಕ ಮಹಾದೇವ ರಾಣೆ ಇದ್ದರು.</p>.<p>ಮಡಿವಾಳ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸುವಂತೆ ಸಮುದಾಯದ ಪ್ರಮುಖರು ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>