ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳೆಲ್ಲ ಹೊರರಾಜ್ಯಗಳಿಂದ ವಲಸೆ ಬಂದವರಲ್ಲಿ ಕಾಣಿಸಿಕೊಂಡಿದ್ದವು. ಪ್ರಸಕ್ತ ಸಾಲಿನಲ್ಲಿ ಒಂದು ಪ್ರಕರಣ ಮಾತ್ರ ವರದಿಯಾಗಿದೆ. ಉತ್ತರ ಭಾರತದ ರಾಜ್ಯಗಳಿಂದ ಮೀನುಗಾರಿಕೆ ಕೆಲಸಕ್ಕೆ, ನೌಕಾನೆಲೆ, ಅಣು ವಿದ್ಯುತ್ ಸ್ಥಾವರ ಕೆಲಸಕ್ಕೆ ವಲಸೆ ಬರುವ ಕಾರ್ಮಿಕರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಅವರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗುತ್ತಿದೆ’ ಎಂದರು.