ಹೆದ್ದಾರಿ ವಿಸ್ತರಣೆಗಾಗಿ ಗುರುವಾರ ಹಲವು ಮರಗಳಿಗೆ ಕೊಡಲಿ ಏಟು ಬಿದ್ದಿತ್ತು. ಈ ಪೈಕಿ ನಾಲ್ಕಾರು ಮರಗಳಲ್ಲಿ ವಾಸವಿದ್ದ ಮಿಸರಿ ಹುಳುಗಳು ನೆಲೆ ಕಳೆದುಕೊಂಡಿದ್ದರಿಂದ ಚೆಲ್ಲಾಪಿಲ್ಲಿಯಾಗಿ ಹಾರಲಾರಂಭಿಸಿದ್ದವು. ನೂರಾರು ಮರಿಗಳು ಸತ್ತಿದ್ದವು. ಮೊಟ್ಟೆಗಳು ಇರುವೆ, ಓತಿಕ್ಯಾತದ ಪಾಲಾಗುತ್ತಿದ್ದವು. ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಮಿಸರಿಗಳಿಗೆ ಗುರುಪ್ರಸಾದ ಆಸರೆಯಾದರು.