<p><strong>ಕಾರವಾರ:</strong> ‘ಎಚ್.ಐ.ವಿ ಸೋಂಕಿತರನ್ನು ಅಸ್ಪೃಶ್ಯರಂತೆ ಕಾಣುವ ಮನಸ್ಥಿತಿ ದೂರವಾಗಬೇಕು. ಅವರಲ್ಲಿ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಜ್ಜಪ್ಪ ಸೊಗಲದ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆ, ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಂಟಿಯಾಗಿ ಆಯೋಜಿಸಿದ್ದ ಜಾಗೃತಿ ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>18 ರಿಂದ 25 ವರ್ಷ ವಯಸ್ಸಿನ ಯುವಕ, ಯುವತಿಯರಿಗೆ ಪ್ರತ್ಯೇಕ ವಿಭಾಗದಲ್ಲಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ 60ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.</p>.<p>ಪ್ರಥಮ ಸ್ಥಾನವನ್ನು ಯುವಕರ ವಿಭಾಗದಲ್ಲಿ ನಗರದ ಬಾಡದ ಶಿವಾಜಿ ಕಾಲೇಜಿನ ಜೋಸೆಪ್, ರಮೇಶಕುಮಾರ್ ಕಿನೇಕರ ದ್ವಿತೀಯ ಸ್ಥಾನ ಪಡೆದರು. ಯುವತಿಯರ ವಿಭಾಗದಲ್ಲಿ ಸರಸ್ವತಿ ವಿದ್ಯಾಲಯದ ಪ್ರಿಯಾರಾಮ ಮೊದಲ ಸ್ಥಾನ, ಸದಾಶಿವಗಡದ ಶಿವಾಜಿ ಕಾಲೇಜಿನ ಸಂಜನಾ ನೇಗಿನಹಾಳ ದ್ವಿತೀಯ ಸ್ಥಾನ ಪಡೆದರು.</p>.<p>ಜಿಲ್ಲಾ ಏಡ್ಸ್ ನಿಂಯತ್ರಣಾಧಿಕಾರಿ ಡಾ.ಮಂಜುನಾಥ ಇದ್ದರು. ಸ್ಪರ್ಧೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜ್ ಬಿ.ವಿ ಚಾಲನೆ ನೀಡಿದ್ದರು.</p>.<p>ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಸುಭಾಷ ಕಾಮತ್, ಸುಧಾಕರ ಗುನಗಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಎಚ್.ಐ.ವಿ ಸೋಂಕಿತರನ್ನು ಅಸ್ಪೃಶ್ಯರಂತೆ ಕಾಣುವ ಮನಸ್ಥಿತಿ ದೂರವಾಗಬೇಕು. ಅವರಲ್ಲಿ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಜ್ಜಪ್ಪ ಸೊಗಲದ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆ, ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಂಟಿಯಾಗಿ ಆಯೋಜಿಸಿದ್ದ ಜಾಗೃತಿ ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>18 ರಿಂದ 25 ವರ್ಷ ವಯಸ್ಸಿನ ಯುವಕ, ಯುವತಿಯರಿಗೆ ಪ್ರತ್ಯೇಕ ವಿಭಾಗದಲ್ಲಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ 60ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.</p>.<p>ಪ್ರಥಮ ಸ್ಥಾನವನ್ನು ಯುವಕರ ವಿಭಾಗದಲ್ಲಿ ನಗರದ ಬಾಡದ ಶಿವಾಜಿ ಕಾಲೇಜಿನ ಜೋಸೆಪ್, ರಮೇಶಕುಮಾರ್ ಕಿನೇಕರ ದ್ವಿತೀಯ ಸ್ಥಾನ ಪಡೆದರು. ಯುವತಿಯರ ವಿಭಾಗದಲ್ಲಿ ಸರಸ್ವತಿ ವಿದ್ಯಾಲಯದ ಪ್ರಿಯಾರಾಮ ಮೊದಲ ಸ್ಥಾನ, ಸದಾಶಿವಗಡದ ಶಿವಾಜಿ ಕಾಲೇಜಿನ ಸಂಜನಾ ನೇಗಿನಹಾಳ ದ್ವಿತೀಯ ಸ್ಥಾನ ಪಡೆದರು.</p>.<p>ಜಿಲ್ಲಾ ಏಡ್ಸ್ ನಿಂಯತ್ರಣಾಧಿಕಾರಿ ಡಾ.ಮಂಜುನಾಥ ಇದ್ದರು. ಸ್ಪರ್ಧೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜ್ ಬಿ.ವಿ ಚಾಲನೆ ನೀಡಿದ್ದರು.</p>.<p>ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಸುಭಾಷ ಕಾಮತ್, ಸುಧಾಕರ ಗುನಗಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>