<p><strong>ಭಟ್ಕಳ</strong>: ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿ ಸಂಭ್ರಮದಿಂದ ನಡೆದ ತಾಲೂಕಿನ ಪ್ರಸಿದ್ಧ ಮಾರಿ ಹಬ್ಬ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಗುರುವಾರ ಸಂಜೆ ಮಾರಿದೇವಿ ಮೂರ್ತಿ ವಿಸರ್ಜಿಸುವ ಮೂಲಕ ಸಂಪನ್ನಗೊಂಡಿತು.</p>.<p>ಧಾರಾಕಾರ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ದೇವಿಯ ಮೂರ್ತಿಯನ್ನು ಪಟ್ಟಣದ ಮಾರಿಗುಡಿಯಿಂದ ಸಾವಿರಾರು ಭಕ್ತರು, ಸ್ವಯಂ ಸೇವಕರು, ಆಡಳಿತ ಮಂಡಳಿ ಸದಸ್ಯರು ಸೇರಿ ಜಾಲಿಕೋಡಿಯ ಸಮುದ್ರ ತೀರಕ್ಕೆ ಒಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಿದರು.</p>.<p>ಸಂಜೆ 5 ಗಂಟೆ ಸುಮಾರಿಗೆ ಸ್ವಯಂ ಸೇವಕರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಮಾರಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಾಲಿಕೋಡಿ ಸಮುದ್ರ ತೀರಕ್ಕೆ ಕೊಂಡೊಯ್ದು ವಿಧಿವಿಧಾನಗಳ ಮೂಲಕ ವಿಸರ್ಜಿಸುವುದರೊಂದಿಗೆ ಮಾರಿ ಜಾತ್ರೆ ಸಂಪನ್ನಗೊಂಡಿತ್ತು.</p>.<p>ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪರಮೇಶ್ವರ ನಾಯ್ಕ, ಶ್ರೀಧರ ನಾಯ್ಕ, ಶ್ರೀಪಾದ ಕಂಚುಗಾರ, ನಾರಾಯಣ ಖಾರ್ವಿ ಮಾದೇವ ಮೊಗೇರ, ರಘುವೀರ ಬಾಳಗಿ, ದಿನೇಶ ನಾಯ್ಕ, ಕೃಷ್ಣ ನಾಯ್ಕ, ನಾರಾಯಣ ಖಾರ್ವಿ, ಗೋವಿಂದ ನಾಯ್ಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಭಟ್ಕಳ ಡಿವೈಎಸ್ಪಿ ಕೆ. ಮಹೇಶ ಅವರು ಮೆರವಣಿಗೆಯ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಅಹಿತರ ಘಟನೆ ನಡೆಯದಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿ ಸಂಭ್ರಮದಿಂದ ನಡೆದ ತಾಲೂಕಿನ ಪ್ರಸಿದ್ಧ ಮಾರಿ ಹಬ್ಬ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಗುರುವಾರ ಸಂಜೆ ಮಾರಿದೇವಿ ಮೂರ್ತಿ ವಿಸರ್ಜಿಸುವ ಮೂಲಕ ಸಂಪನ್ನಗೊಂಡಿತು.</p>.<p>ಧಾರಾಕಾರ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ದೇವಿಯ ಮೂರ್ತಿಯನ್ನು ಪಟ್ಟಣದ ಮಾರಿಗುಡಿಯಿಂದ ಸಾವಿರಾರು ಭಕ್ತರು, ಸ್ವಯಂ ಸೇವಕರು, ಆಡಳಿತ ಮಂಡಳಿ ಸದಸ್ಯರು ಸೇರಿ ಜಾಲಿಕೋಡಿಯ ಸಮುದ್ರ ತೀರಕ್ಕೆ ಒಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಿದರು.</p>.<p>ಸಂಜೆ 5 ಗಂಟೆ ಸುಮಾರಿಗೆ ಸ್ವಯಂ ಸೇವಕರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಮಾರಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಾಲಿಕೋಡಿ ಸಮುದ್ರ ತೀರಕ್ಕೆ ಕೊಂಡೊಯ್ದು ವಿಧಿವಿಧಾನಗಳ ಮೂಲಕ ವಿಸರ್ಜಿಸುವುದರೊಂದಿಗೆ ಮಾರಿ ಜಾತ್ರೆ ಸಂಪನ್ನಗೊಂಡಿತ್ತು.</p>.<p>ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪರಮೇಶ್ವರ ನಾಯ್ಕ, ಶ್ರೀಧರ ನಾಯ್ಕ, ಶ್ರೀಪಾದ ಕಂಚುಗಾರ, ನಾರಾಯಣ ಖಾರ್ವಿ ಮಾದೇವ ಮೊಗೇರ, ರಘುವೀರ ಬಾಳಗಿ, ದಿನೇಶ ನಾಯ್ಕ, ಕೃಷ್ಣ ನಾಯ್ಕ, ನಾರಾಯಣ ಖಾರ್ವಿ, ಗೋವಿಂದ ನಾಯ್ಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಭಟ್ಕಳ ಡಿವೈಎಸ್ಪಿ ಕೆ. ಮಹೇಶ ಅವರು ಮೆರವಣಿಗೆಯ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಅಹಿತರ ಘಟನೆ ನಡೆಯದಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>