ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಅರ್ಜಿದಾರರ ಪರ ವಕೀಲ ಮೇಘರಾಜ ಆರ್.ಮೇತ್ರಿ, ‘297 ಜನರಿಗೆ ತಲಾ ನಾಲ್ಕು ಎಕರೆಗಳಂತೆ ಅಂದು ಮಂಜೂರು ಮಾಡಲಾಗಿತ್ತು. ಗ್ರಾಮದ ಬ್ಲಾಕ್ ಸಂಖ್ಯೆ 79, ಅಜಮನಾಳ ಗ್ರಾಮದ ಬ್ಲಾಕ್ ಸಂಖ್ಯೆ 5, ಬ್ಲಾಕ್ ಸಂಖ್ಯೆ 20 ‘ಬ’ಗಳಲ್ಲಿ ಅರ್ಜಿದಾರರಿಗೆ ಜಮೀನು ನೀಡಲಾಗಿದೆ. ಆದರೆ, ಜಮೀನಿನಲ್ಲಿ ಗಡಿ ಗುರುತು ಮಾಡಿ ಬಂದೊಬಸ್ತ್ ಮಾಡದ ಕಾರಣ ಕೆಲವರು ಪ್ರಭಾವಿಗಳು, ತಮಗೆ ಮಂಜೂರಾಗಿದ್ದಕ್ಕಿಂತ ಹೆಚ್ಚಿನ ಜಮೀನನ್ನು ಬಳಕೆ ಮಾಡುತ್ತಿದ್ದಾರೆ’ ಎಂದು ದೂರಿದರು.